Editorial

ನ್ಯಾಯಾಂಗ ವ್ಯವಸ್ಥೆಯ ಒಂದು ನೋಟ…….

” ನ್ಯಾಯಾಲಯಗಳು ಕಾನೂನನ್ನು ಎತ್ತಿ ಹಿಡಿಯುತ್ತವೆಯೇ ಹೊರತು ನ್ಯಾಯವನ್ನೇ ಕೊಡುತ್ತವೆ ಎಂಬುದು ಸಂಪೂರ್ಣ ಸತ್ಯವಲ್ಲ. ಏಕೆಂದರೆ ನ್ಯಾಯಾಲಯಗಳ ದೃಷ್ಟಿಯಲ್ಲಿ ಕಾನೂನೇ ನ್ಯಾಯ “
( Courts will delivered the law not the justice )
ಎಂಬ ಅಭಿಪ್ರಾಯ ಪ್ರಚಲಿತವಾಗಿದೆ.

ಭಾರತದ ನ್ಯಾಯಾಂಗ ವ್ಯವಸ್ಥೆಗೆ ಇದು ಬಹುತೇಕ ಅನ್ವಯಿಸುತ್ತದೆ.

ಭಾರತೀಯ ಸಮಾಜವನ್ನು ಬಹುತೇಕ ಭಯ ಭಕ್ತಿ ನಂಬಿಕೆ ‌ಸಂಸ್ಕೃತಿ ಸಂಪ್ರದಾಯ ಭ್ರಮೆ ಮತ್ತು ಅಸಮಾನತೆಯ ಆಧಾರದ ಮೇಲೆ ನಿರ್ಮಿಸಲಾಗಿದೆ. ಅಂತಹ ಸಮಾಜಕ್ಕೆ 1950 ರ ನಂತರ ಸಂವಿಧಾನವೆಂಬ ಒಂದು ಕ್ರಮಬದ್ಧ ನೀತಿ ನಿಯಮಗಳನ್ನು ಅಳವಡಿಸಲಾಯಿತು.

ಬಹುಶಃ ಅದಕ್ಕೆ ಬೇಕಾದ ಮಾನಸಿಕ ಸಿದ್ದತೆ ಅನೇಕ ಭಾರತೀಯರಿಗೆ ಇರಲಿಲ್ಲ. ಒಂದು ರೀತಿಯ ವೈಯಕ್ತಿಕ ಮತ್ತು ಸಾಮಾಜಿಕ ಘರ್ಷಣೆ ಪ್ರಾರಂಭವಾಯಿತು.

ಬಡತನ ಅಜ್ಞಾನ ಅನಕ್ಷರತೆ ಶೋಷಣೆ ಈ ಸಮಾಜದ ದಿನನಿತ್ಯದ ಬದುಕಿನಲ್ಲಿ ಹಾಸುಹೊಕ್ಕಾಗಿತ್ತು. ರಾಜಕೀಯ ಮತ್ತು ಆರ್ಥಿಕ ವ್ಯವಸ್ಥೆಯನ್ನು ಕೆಲವೇ ಕುಟುಂಬಗಳು ಹಿಡಿತದಲ್ಲಿ ಇಟ್ಟುಕೊಂಡಿದ್ದವು.

ಸುಮಾರು 1977 ರವರೆಗೆ ಈ ಸ್ಥಿತಿ ಹಾಗೆಯೇ ಮುಂದುವರೆಯಿತು. ಅಲ್ಲಿಂದ ನಿಧಾನವಾಗಿ ಒಂದಷ್ಟು ಬದಲಾವಣೆಗಳು ಆಗತೊಡಗಿದವು. ಜನಜಾಗೃತಿ ಮೂಡತೊಡಗಿತು. 1995 ರ ನಂತರ ಅದು ಮತ್ತಷ್ಟು ವೇಗ ಪಡೆಯಿತು.

ಸಾಮಾಜಿಕ ಬದಲಾವಣೆಯ ಜೊತೆಗೆ ಆರ್ಥಿಕ ಬದಲಾವಣೆಯು ಸಹ ಮತ್ತಷ್ಟು ವೇಗ ಪಡೆಯಿತು. ಅಲ್ಲಿಂದ ಮುಂದೆ ಮಾನವೀಯ ಮತ್ತು ನೈತಿಕ ಮೌಲ್ಯಗಳ ಕುಸಿತವೂ ವೇಗ ಪಡೆಯಿತು.

ನಾಗರಿಕ ಮೌಲ್ಯಗಳ ಆಧಾರದ ಮೇಲೆ ಸಮಾಜವನ್ನು ರೂಪಿಸಿಕೊಂಡಿದ್ದ ವಿದೇಶಿ ವ್ಯಾಪಾರಗಾರರು ದೇಶದೊಳಗೆ ಪ್ರವೇಶಿಸಿದ ನಂತರ ಭಾರತೀಯ ಮನಸ್ಸುಗಳು ಚಂಚಲವಾಗಿದ್ದು ನೇರವಾಗಿಯೇ ಗಮನಿಸಬಹುದಾಗಿದೆ. ವಿದೇಶಿ ಬಂಡವಾಳಗಾರರು ಹಣವನ್ನೇ ಕೇಂದ್ರೀಕರಿಸಿ ಭಾರತದ ಮಾರುಕಟ್ಟೆ ಪ್ರವೇಶಿಸಿ ಇಲ್ಲಿನ ನೈತಿಕ ಮೌಲ್ಯಗಳು ಕುಸಿಯಲು ಪ್ರೇರೇಪಿಸಿದರು.

ಸಮಾಜ – ಮಾನವೀಯ ಮೌಲ್ಯಗಳು – ಸರ್ಕಾರ ಎಲ್ಲದರ ಆಧಾರದ ಸ್ತಂಭವಾಗಿದ್ದ ನೈತಿಕತೆಯ ಜಾಗದಲ್ಲಿ ಕಾನೂನು ಆಶ್ರಯ ಪಡೆಯತೊಡಗಿತು. ಮೊದಲು ಸಣ್ಣ ಪ್ರಮಾಣದಲ್ಲಿ ಇದ್ದ ಇವು ನಂತರ ವ್ಯಾಪಕವಾಗಿ ಬದಲಾಯಿತು.

ಹಣದಿಂದಲೇ ಕಾನೂನನ್ನು ಸಹ ಪಡೆಯಬಹುದು ಎಂಬ ಮನೋಭಾವ ಬಲವಾಯಿತು. ಕೊಲೆ ಅತ್ಯಾಚಾರ ಹಲ್ಲೆ ಭ್ರಷ್ಟಾಚಾರ ಮಾಡಿಯೂ ಕಾನೂನಿನ ಮೂಲಕವೇ ತಪ್ಪಿಸಿಕೊಳ್ಳಬಹುದು ಎಂದು ಸಮಾಜದ ಬಹುತೇಕ ಜನರಿಗೆ ಮನವರಿಕೆಯಾಯಿತು.

ನ್ಯಾಯಾಲಯ ಅಥವಾ ಕಾನೂನುಗಳು ಅಪರಾಧಿಗಳ ಆಶ್ರಯ ತಾಣವಾಯಿತು. ನ್ಯಾಯವನ್ನು ಅಥವಾ ಪರೋಕ್ಷವಾಗಿ ಕಾನೂನನ್ನು ಹಣ ಅಧಿಕಾರದಿಂದ ಪಡೆಯಬಹುದು ಎಂದು ಅಪರಾಧಿ ಮನೋಭಾವದವರಿಗೆ ಅರಿವಾಯಿತು. ಅದರ ದುಷ್ಪರಿಣಾಮಗಳೇ ಉತ್ತರ ಪ್ರದೇಶದ ಪ್ರತಿಭಟನಾ ನಿರತ ರೈತರ ಮೇಲೆ ಹಾಡು ಹಗಲೇ ವಾಹನ ಚಲಾಯಿಸುವ ಧೈರ್ಯ ಪ್ರದರ್ಶಿಸಿದ್ದು ಮತ್ತು ಆ ರೀತಿಯ ಅನೇಕ ಘಟನೆಗಳು.

ಇದನ್ನು ನಿಯಂತ್ರಿಸಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಸರ್ಕಾರಗಳು ಚುನಾವಣಾ ರಾಜಕೀಯದಲ್ಲಿ ಮುಳುಗಿ ಹೋಗಿ ಮಾನವೀಯ ಮೌಲ್ಯಗಳಿಗಿಂತ ಓಟುಗಳ ಮೌಲ್ಯವನ್ನೇ ಹೆಚ್ಚು ಅಳೆಯುವುದರಿಂದ ಕಾನೂನುಗಳು ನಿಷ್ಪ್ರಯೋಜಕವಾಗುವ ಹಂತ ತಲುಪಿದೆ.

ನ್ಯಾಯಾಂಗ ವ್ಯವಸ್ಥೆಯ ಮೇಲೆ ಜನ ನಂಬಿಕೆ ಕಳೆದುಕೊಂಡಿದ್ದಾರೆ. ದೈವತ್ವದ ಮೇಲೆಯೂ ನಂಬಿಕೆ ಶಿಥಿಲವಾಗಿದೆ. ಹಾಗಾದರೆ ಪರ್ಯಾಯ ಏನು ಎಂಬ ಪ್ರಶ್ನೆ ಕಾಡತೊಡಗಿದೆ.

ಒಂದು ದೇಶದ ಸಂವಿಧಾನದ ಯಶಸ್ಸಿಗೆ ನೈತಿಕ ಮೌಲ್ಯಗಳು ಮುಖ್ಯವೇ ಹೊರತು ಕಾನೂನಿನ ನೀತಿ ನಿಯಮಗಳಲ್ಲ. ಇದು ಭಾರತದ ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಇದೇ ಅರ್ಥದ ಮಾತುಗಳನ್ನು ಹೇಳಿದ್ದರು.

ನೈತಿಕತೆಯೇ ಕಾನೂನು – ಕಾನೂನೇ ನೈತಿಕತೆ ಎಂಬುದು ಜನರಿಗೆ ಮನವರಿಕೆಯಾಗದೆ ಈ ಪರಿಸ್ಥಿತಿ ಬದಲಾಗುವುದಿಲ್ಲ. ವಿಶ್ವದ ಬಹುದೊಡ್ಡ ಮತ್ತು ಅತ್ಯುತ್ತಮ ಸಂವಿಧಾನ ಹೊಂದಿರುವ ಭಾರತದಲ್ಲಿ ಹಿಂಸಾ ಪ್ರವೃತ್ತಿ ಹೆಚ್ಚುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಭಾವನಾತ್ಮಕ ನೆಲೆಯಲ್ಲಿ ಮಾತನಾಡುತ್ತಾ, ಸಮುದಾಯಗಳ ನಡುವೆ ದ್ವೇಷ ಹರಡುತ್ತಾ ಆಡಳಿತಾತ್ಮಕ ವಿಫಲತೆಯನ್ನು ಮುಚ್ಚಿಕೊಳ್ಳುವ ರಾಜಕೀಯ ವ್ಯವಸ್ಥೆ ದೇಶವನ್ನು ಹಿನ್ನಡೆಸುತ್ತಿದೆ.

ಇದನ್ನು ತುಂಬಾ ಗಂಭೀರವಾಗಿ ನಾವುಗಳು ಪರಿಗಣಿಸಬೇಕಾಗಿದೆ. ಮಾನವೀಯ ಮತ್ತು ನೈತಿಕ ಮೌಲ್ಯಗಳು ಕುಸಿಯದಂತೆ ತಡೆಯುವ ಜವಾಬ್ದಾರಿ ನಾವು ಹೊರಬೇಕಾಗಿದೆ. ಇಲ್ಲದಿದ್ದರೆ ಈಗಾಗಲೇ ಪ್ರಾರಂಭವಾಗಿರುವ ಅನೈತಿಕ ಮತ್ತು ಅಮಾನವೀಯ ಮೌಲ್ಯಗಳೇ ಸಮಾಜದಲ್ಲಿ ಮಾನ್ಯತೆ ಪಡೆಯುವ ಎಲ್ಲಾ ಸಾಧ್ಯತೆಗಳಿವೆ ಎಂದು ಎಚ್ಚರಿಸುತ್ತಾ………

  • ವಿವೇಕಾನಂದ ಹೆಚ್. ಕೆ.
Team Newsnap
Leave a Comment
Share
Published by
Team Newsnap

Recent Posts

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More

May 3, 2024

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024