ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಹುಚ್ಚು ನಾಯಿಯೊಂದು 30 ಕ್ಕೂ ಹೆಚ್ಚು ಮಂದಿಯನ್ನು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ.
ಕೆಆರ್ಪೇಟೆ ತಾಲೂಕಿನ ಮಾಕವಳ್ಳಿ, ಪುರ ಗೇಟ್, ಕುಂದನಹಳ್ಳಿ, ಹೆಗ್ಗಡಹಳ್ಳಿ, ವಡ್ಡರಹಳ್ಳಿಯಲ್ಲಿ ಓಡಾಡುತ್ತಿರುವ ಹುಚ್ಚು ಹಿಡಿದ ನಾಯಿ ಸಿಕ್ಕ ಸಿಕ್ಕವರ ಮನಸೋ ಇಚ್ಛೆ ದಾಳಿ ಮಾಡುತ್ತಿದೆ.
ಕಬ್ಬು ಕಟಾವು ಮಾಡಲು ಗ್ರಾಮಕ್ಕೆ ಆಗಮಿಸಿದ ಕೂಲಿ ಕಾರ್ಮಿಕರ ಮೇಲೂ ನಾಯಿ ದಾಳಿ ಮಾಡಿ ಕಚ್ಚಿದೆ.
ಸದ್ಯ ಹುಚ್ಚುನಾಯಿ ಕಡಿತಕ್ಕೆ ಒಳಗಾದ ಜನರಿಗೆ ಕೆಆರ್ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಹಲವರು ನಾಯಿ ದಾಳಿಗೆ ಗಂಭಿರವಾಗಿ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.
ಹುಚ್ಚು ನಾಯಿಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಸಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ