ಎಸ್ ಐ , ಡಿವೈಎಸ್ ಪಿ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಠಾಣೆಯ ಮುಂದೆ ವಿಷ ಸೇವಿಸಿದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಪೊಲೀಸ್ ಠಾಣೆ ಮುಂದೆ
ಜರುಗಿದೆ,
ಎನ್.ಗೌರಿಪುರ ಗ್ರಾಮದ ಗಿರೀಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಈತನನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕ್ಷುಲ್ಲಕ ಕಾರಣಗಳಿಗೆ ಎರಡು ಸಮುದಾಯದ ಗುಂಪುಗಳ ನಡುವೆ ಗಲಾಟೆ ನಡೆದ ಕಾರಣ ಠಾಣೆಯಲ್ಲಿ ರಾಜಿ ಪಂಚಾಯ್ತಿ ಸಭೆ ಇತ್ತು.
ಈ ಸಂಧಾನ ಸಭೆಯಲ್ಲಿ ಎಸ್.ಐ.ಮಹೇಶ್ ಹಾಗೂ ಡಿವೈಎಸ್ಪಿ ಶ್ರೀಧರ್ ರಾಜಿ ಪಂಚಾಯ್ತಿ ಕಾರ್ಯ ನಡೆಯುವ ವೇಳೆಯಲ್ಲಿ ವಿನಾಕಾರಣ ಬೈದು ಮಾನಹಾನಿ ಮಾಡಿದ್ದಾರೆಂದು ಆರೋಪಿಸಿರುವ ಗಿರೀಶ್ ಗಲಾಟೆ ಬಿಡಿಸಿದ್ದಕ್ಕೆ ಪೊಲೀಸರು ಹೆದರಿಸಿರುವುದಾಗಿ ಆರೋಪಿಸಿದ್ದಾರೆ.
ಎಸ್ಐ, ಡಿವೈಎಸ್ಪಿಯಿಂದ ಬೈಗುಳ ಹಾಗೂ ಬೆದರಿಕೆಗೆ ಆ ವ್ಯಕ್ತಿ ನೊಂದು ಹೋಗಿದ್ದಾರೆ,ಅಷ್ಟೇ ಅಲ್ಲದೇ ಹೋಟೆಲ್ನಲ್ಲಿ ಜನರಿಗೆ ತಾರತಮ್ಯ ಮಾಡುವುದಾಗಿಯೂ ತಿಳಿಸಿರುವ ಇವರು, ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ನಾಯಕನಹಟ್ಟಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ