ಎಸ್ ಐ , ಡಿವೈಎಸ್ ಪಿ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಠಾಣೆಯ ಮುಂದೆ ವಿಷ ಸೇವಿಸಿದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಪೊಲೀಸ್ ಠಾಣೆ ಮುಂದೆ
ಜರುಗಿದೆ,
ಎನ್.ಗೌರಿಪುರ ಗ್ರಾಮದ ಗಿರೀಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಈತನನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕ್ಷುಲ್ಲಕ ಕಾರಣಗಳಿಗೆ ಎರಡು ಸಮುದಾಯದ ಗುಂಪುಗಳ ನಡುವೆ ಗಲಾಟೆ ನಡೆದ ಕಾರಣ ಠಾಣೆಯಲ್ಲಿ ರಾಜಿ ಪಂಚಾಯ್ತಿ ಸಭೆ ಇತ್ತು.
ಈ ಸಂಧಾನ ಸಭೆಯಲ್ಲಿ ಎಸ್.ಐ.ಮಹೇಶ್ ಹಾಗೂ ಡಿವೈಎಸ್ಪಿ ಶ್ರೀಧರ್ ರಾಜಿ ಪಂಚಾಯ್ತಿ ಕಾರ್ಯ ನಡೆಯುವ ವೇಳೆಯಲ್ಲಿ ವಿನಾಕಾರಣ ಬೈದು ಮಾನಹಾನಿ ಮಾಡಿದ್ದಾರೆಂದು ಆರೋಪಿಸಿರುವ ಗಿರೀಶ್ ಗಲಾಟೆ ಬಿಡಿಸಿದ್ದಕ್ಕೆ ಪೊಲೀಸರು ಹೆದರಿಸಿರುವುದಾಗಿ ಆರೋಪಿಸಿದ್ದಾರೆ.
ಎಸ್ಐ, ಡಿವೈಎಸ್ಪಿಯಿಂದ ಬೈಗುಳ ಹಾಗೂ ಬೆದರಿಕೆಗೆ ಆ ವ್ಯಕ್ತಿ ನೊಂದು ಹೋಗಿದ್ದಾರೆ,ಅಷ್ಟೇ ಅಲ್ಲದೇ ಹೋಟೆಲ್ನಲ್ಲಿ ಜನರಿಗೆ ತಾರತಮ್ಯ ಮಾಡುವುದಾಗಿಯೂ ತಿಳಿಸಿರುವ ಇವರು, ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ನಾಯಕನಹಟ್ಟಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್