February 22, 2026

Newsnap Kannada

The World at your finger tips!

mysore j

ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನ

Spread the love

ತನಗೆ ಸಾಲ ನೀಡಿದವರು ಮರುಪಾವತಿಸುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ವ್ಯಕ್ತಿಯೊಬ್ಬರು ತನಗೆ ತಾನೇ ಚಾಕುವಿನಿಂದ ಇರಿದುಕೊಂಡು ಸಾರ್ವಜನಿಕರು, ಪೊಲೀಸ್ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ನಡೆದಿದೆ.

ರಾಧಾಕೃಷ (೪೫) ಎಂಬುವವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಆತ್ಮಹತ್ಯಗೆ ಯತ್ನಿಸಿದವರು. ಸಾಲ ನೀಡಿದವರ ಕಿರುಕುಳವನ್ನು ಸಹಿಸಲಾಗುತ್ತಿಲ್ಲ. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಸಿ ಸಾರ್ವಜನಿಕರು ಮತ್ತು ಪೊಲೀಸ್ ಎದುರೇ ಎದೆಗೆ ಚಾಕುವಿನಿಂದ ಚುಚ್ಚಿಕೊಂಡಿದ್ದಾರೆ.

ಇದನ್ನು ಕಂಡ ಪೊಲೀಸರು ಕೂಡಲೇ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಗಿದ್ದಾರೆ. ಈ ಕುರಿತು ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ವಿವರ ವಿಚಾರಣೆ ಬಳಿಕ ತಿಳಿಯಲಿದೆ.

error: Content is protected !!