ನಿಷ್ಕರುಣೆಯ ತಾಯಿಯೊಬ್ಬಳು ತಾನೇ ಹೆತ್ತ ಗಂಡು ಹಸುಗೂಸನ್ನು 40 ಅಡಿ ಆಳದ ಪಾಳು ಬಾವಿಗೆ ಎಸೆದು ಹೋದ ಪಾಂಡವಪುರ ತಾಲೂಕಿನ ಚಂದ್ರೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಮಗು ಜನನಿಸಿದ ಕೆಲ ನಿಮಿಷದಲ್ಲೆ ಪಾಳು ಬಾವಿಗೆ ಎಸೆದಿದ್ದಾಳೆ ಆ ಬಾವಿಯಲ್ಲಿ ಹಾವೊಂದು ಇದೆ. ಹಾವಿನ ಬಳಿ ಇದ್ದರೂ ಮಗುವಿಗೆ ಹಾವು ಏನು ಮಾಡಿರಲಿಲ್ಲ.
ಈ ಬಾವಿಯ ಮಾರ್ಗ ಮಧ್ಯೆ ತೋಟಕ್ಕೆ ಹೊರಟಿದ್ದ ರೈತ ಮಹಿಳೆಯೊಬ್ಬಳಿಗೆ ಮಗು ಅಳುವ ಶಬ್ಧ ಕೇಳಿ ಬಾವಿಗೆ ಇಣುಕಿದಳು. ಈ ವೇಳೆ ಅಳುತ್ತಿದ್ದ ಮಗುವಿನ ದೃಶ್ಯ ಆಕೆಯ ಗಮನಕ್ಕೆ ಬಂದ ಮಹಿಳೆ ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ ಕೂಡಲೇ ಬಾವಿಗೆ ಇಳಿದು ಮಗುವಿನ ರಕ್ಷಣೆ ಮಾಡಿದ್ದಾರೆ.
ಬಳಿಕ ಮಗುವಿಗೆ ಬೇರೆ ತಾಯಿಯೊಬ್ಬಳು ಎದೆ ಹಾಲುಣಿಸಿ ಮಾನವೀಯತೆ ಮೆರೆದ್ದಾರೆ . ನಂತರ ಮಗುವನ್ನು ಆರೈಕೆ ಮಾಡಿದ ಗ್ರಾಮದ ಮಹಿಳೆಯರು. ಈ ಬಗ್ಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಮಾಹಿತಿ ನೀಡಿ, ಮಂಡ್ಯ ಮಿಮ್ಸ್ ಆಸ್ಪತ್ರೆ ಮಗುವನ್ನು ದಾಖಲಿಸಿದ್ದಾರೆ. ಕೆಆರ್ ಪೇಟೆಯ ತ್ರಿವೇಣಿ ಸಂಗಮದ ಮಹಾ ಕುಂಭಮೇಳಕ್ಕೆ ಯುಪಿ ಸಿಎಂ ಯೋಗಿಆದಿತ್ಯನಾಥ
ಇದೀಗ ಮಗುವಿಗೆ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗು ಆರೋಗ್ಯಕರವಾಗಿ ಇದೆ. ಯಾವುದೇ ಪ್ರಾಣಾಪಾಯವಿಲ್ಲ, ಬಾವಿ ಮೇಲಿಂದ ಎಸೆದಿರುವ ಕಾರಣಕ್ಕಾಗಿ ಮಗು ಬೆನ್ನಿನ ಹಿಂದೆ ಸಣ್ಣ ಪುಟ್ಟ ಗಾಯವಾಗಿದೆ.
ಇನ್ನೂ 10, 15 ದಿನ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತೆ. ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೀಡಲಾಗುವುದು ಎಂದು ಮಂಡ್ಯ ಮಿಮ್ಸ್ ವೈದ್ಯಕೀಯ ಅಧಿಕಾರಿಗಳು ಹೇಳಿದ್ದಾರೆ.
- ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
More Stories
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ