ಲೇಖಕ ಅ.ನಾ.ಪ್ರಹಾದರಾವ್ ಕನ್ನಡ ಚಲನಚಿತ್ರ ಚರಿತ್ರೆ ಕುರಿತು ದಾಖಲಿಸಿರುವ ‘ಹೆಜ್ಜೆಗುರುತು’ ಕೃತಿಯನ್ನು ಕವಿ, ಸಾಹಿತಿ ಡಾ.ಹೆಚ್.ಎಸ್.ವೆಂಕಟೇಶಮೂರ್ತಿ ಅವರು ತಮ್ಮ ನಿವಾದಲ್ಲಿ ಗುರುವಾರ ಲೋಕಾರ್ಪಣೆ ಮಾಡಿದರು.
ಹಂಸಜ್ಯೋತಿ ಸಾಂಸ್ಕೃತಿಕ ಸಂಸ್ಥೆಯ ಮು.ಮುರಳೀಧರ ಹಾಗೂ ಶ್ರೀಮತಿ ಮಲ್ಲಿಕಾ ಪ್ರಹ್ಲಾದ್ ಈ ಸಂದರ್ಭದಲ್ಲಿ ಜೊತೆಗೂಡಿದರು.
ಚಿತ್ರರಂಗ ಮೂಕಿ ಕಾಲದಿಂದ ಆರಂಭಗೊಂಡು ಬೆಳವಣಿಗೆಯ ವಿವಿಧ ಮಜಲುಗಳಿಗೆ ಸಂಬಂಧಿಸಿದ ಚಲನಚಿತ್ರಗಳು, ವ್ಯಕ್ತಿಗಳು ಹಾಗೂ ಘಟನಾವಳಿಗಳನ್ನು ಹೆಣೆಯುತ್ತಾ ಕನ್ನಡ ಚಿತ್ರರಂಗದ ಔನತ್ಯವನ್ನು ದಾಖಲಿಸುವ ಪ್ರಯತ್ನವನ್ನು ಈ ಕೃತಿಯಲ್ಲಿ ಮಾಡಲಾಗಿದೆ.
ಕನ್ನಡ ಚಿತ್ರರಂಗದ ಆರಂಭದ ದಿನಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ನಿರ್ಮಾಪಕರು, ನಿರ್ದೇಶಕರು, ಕಲಾವಿದರು, ತಂತ್ರಜ್ಞರು ಸಾಕಷ್ಟು ಕೊಡುಗೆಯನ್ನು ನೀಡುವುದರೊಂದಿಗೆ ಹೊಸ ಪೀಳಿಗೆಯನ್ನು ಬೆಳೆಸಿದ್ದರಿಂದಾಗಿ,
ಚಿತ್ರೋದ್ಯಮ ನಿಂತ ನೀರಾಗದೆ
ವಿಕಸನಗೊಳ್ಳಲು ಸಾಧ್ಯವಾಯಿತು.
ಕನ್ನಡ ಚಿತ್ರರಂಗ ನೆಲೆಯೂರಲು ಭದ್ರಬುನಾದಿ ಹಾಕಿದ ಮಹನೀಯರ ಜೊತೆ ಜೊತೆಯೇ ಮತ್ತಷ್ಟು ಹೊಸ ಪ್ರತಿಭೆಗಳು ಕೂಡಿಕೊಂಡದ್ದರಿಂದ ಚಿತ್ರರಂಗ ಬೆಳೆಯಲು ಸಾಧ್ಯವಾಯಿತು. ಈ ಕೃತಿಯಲ್ಲಿ ಆರಂಭದ ದಶಕಗಳಲ್ಲಿ ಬಿಡುಗಡೆಗೊಂಡ ಕನ್ನಡ ಚಿತ್ರಗಳನ್ನು ಪರಿಚಯ ಮಾಡಿಕೊಡುತ್ತಾ ತನ್ಮೂಲಕ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ದಾಖಲಿಸಲಾಗಿದೆ. ಕ್ರಮೇಣ ಒಂದು ಹಂತ ತಲುಪಿದ ಮೇಲೆ, ಚಿತ್ರರಂಗ ಭದ್ರನೆಲೆಗಟ್ಟಿನ ಮೇಲೆ ನಿಂತ ಕಾರಣದಿಂದ ಕನ್ನಡ ಚಿತ್ರರಂಗ ಹೊಸ ಹೊಸ ಆವಿಷ್ಕಾರಗಳತ್ತ ತನ್ನನ್ನು ತಾನು ತೆರೆದುಕೊಳ್ಳಲಾರಂಭಿಸಿತು.
ಮೂಕಿಚಿತ್ರಗಳು, ಮಾತನಾಡುವ ಚಿತ್ರಗಳು, ಹೊಸ ಹೊಸ ತಂತ್ರಜ್ಞಾನ ಬಳಕೆ, ವಲಸೆಯ ಅನಿವಾರ್ಯತೆಯಲ್ಲಿದ್ದ ಕನ್ನಡ ಚಿತ್ರರಂಗ ನಿಧಾನವಾಗಿ ರಾಜ್ಯಕ್ಕೆ ಬಂದು ನಿಂತ ಪ್ರಕ್ರಿಯೆ, ವರ್ಣ ಚಿತ್ರಗಳು, ಹೊಸ ಅಲೆ ಚಿತ್ರಗಳವರೆಗೂ ಬಿಡುಗಡೆಗೊಂಡ ಚಿತ್ರಗಳು ಹಾಗೂ ಆ ಮೂಲಕ ಚಿತ್ರರಂಗಕ್ಕೆ ಬಂದು ನಿಂತ ಮಹನೀಯರ ಬಗ್ಗೆ ‘ಹೆಜ್ಜೆಗುರುತು’ ಸಂಗತಿಗಳನ್ನು ದಾಖಲೆ ಮಾಡಿದೆ. ಮೈಸೂರಿನ ತಾರಾ ಪ್ರಿಂಟ್ಸ್ ಪ್ರಕಟಿಸಿರುವ ಈ ಕೃತಿ 462 ಪುಟಗಳನ್ನು ಹೊಂದಿದೆ.
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
This website uses cookies.
Leave a Comment