ಕನ್ನಡ ಮಾಧ್ಯಮ ಶಾಲಾ ಪ್ರವೇಶ ಪಡೆಯುವ ಒಂದನೇ ತರಗತಿ ಮಕ್ಕಳಿಗೆ ಬೆಳ್ಳಿಯ ನಾಣ್ಯ ಕೊಡುವ ಜತೆಗೆ ಸರ್ಕಾರ ನೀಡುವ ಉಚಿತ ಕೊಡುಗೆಗಳನ್ನು ನೀಡಲಾಗುತ್ತಿದೆ.
ಎಲ್ಲ ಮಕ್ಕಳಿಗೂ ವರ್ಷಕ್ಕೆ ಆಗುವಷ್ಟು ಉಚಿತ ನೋಟ್ ಪುಸ್ತಕಗಳು, ಶಾಲಾಬ್ಯಾಗ್, ಲೇಖನ ಸಾಮಗ್ರಿ, ಜಾಮೆಟ್ರಿ, ಐಡೆಂಟಿಟಿ ಕಾರ್ಡ್, ಬೆಲ್ಟ್, ಹಾಗೂ 5, 6, 7ನೇ ತರಗತಿಯವರಿಗೆ ಉಚಿತ ಶೈಕ್ಷಣಿಕ ಪ್ರವಾಸ, ಸುತ್ತಮುತ್ತಲ ಹಳ್ಳಿಗಳಿಂದ ಬರುವ ಮಕ್ಕಳಿಗೆ ಉಚಿತ ವಾಹನ ವ್ಯವಸ್ಥೆ ನೀಡಲಾಗುತ್ತಿದೆ ಎಂದು ಪೋಸ್ಟರ್ನಲ್ಲಿ ತಿಳಿಸಲಾಗಿದೆ.
ಇದನ್ನು ಓದಿ : ಬಿಜೆಪಿ ಮುಖಂಡ ಅನಂತರಾಜು ಹನಿಟ್ರ್ಯಾಪ್ ಗೆ ಬಲಿ – ರೇಖಾ, ಸ್ಪಂದನ , ವಿನೋದ್ ಸಾವಿಗೆ ಕಾರಣ?
ಇದು ಶತಮಾನದ ಇತಿಹಾಸವಿರುವ ಮೇಲುಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಹೆಸರಲ್ಲಿ ಪ್ರಕಟವಾಗಿರುವ ಪೋಸ್ಟರ್.
ಖಾಸಗಿ ಶಾಲೆಗಳ ಪೈಪೋಟಿಯ ನಡುವೆಯೂ ಈ ಶಾಲೆ ವಿಭಿನ್ನವಾಗಿ ನಿಲ್ಲುತ್ತಿದೆ.
ಈ ಶಾಲೆಯಲ್ಲಿ ಆಂಗ್ಲಮಾಧ್ಯಮದ 1ರಿಂದ 3ನೇ ಹಾಗೂ ಕನ್ನಡ ಮಾಧ್ಯಮದ 1ರಿಂದ 7 ತರಗತಿಗಳಿಗೆ ಪ್ರವೇಶ ಆರಂಭವಾಗಿದ್ದು, ಮಕ್ಕಳ ಪ್ರವೇಶಕ್ಕಾಗಿ ಸಾಮಾಜಿಕ ಜಾಲತಾಣದ ಮೂಲಕ ಒಂದು ವಿಶೇಷ ಪೋಸ್ಟರ್ ಹಂಚಿಕೊಳ್ಳಲಾಗಿದೆ.
ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗಳತ್ತ ಬರಲು ಪ್ರೇರೇಪಿಸಲಾಗುತ್ತಿದೆ.
ಈಗಾಗಲೇ ಶಾಲೆಯು ಉತ್ತಮವಾದ ಡೆಸ್ಕ್ಗಳು, ಗ್ರಂಥಾಲಯದಲ್ಲಿ ಸಾವಿರಾರು ಪುಸ್ತಕಗಳು ಮತ್ತು ಕ್ರೀಡಾ ಸಾಮಗ್ರಿ ಹೊಂದಿದೆ. ಏಳು ವರ್ಷಗಳಿಂದ ಅನಿವಾಸಿ ಭಾರತೀಯ ಡಾ.ರಾಮಕೃಷ್ಣ ಅವರ ಸಹಕಾರದಲ್ಲಿ ಹಳ್ಳಿಯಿಂದ ಬರುವ ಮಕ್ಕಳಿಗೆ ವಾಹನ ಸೌಲಭ್ಯ ಕಲ್ಪಿಸಲಾಗುತ್ತಿದೆ.
ಈ ಎಲ್ಲಾ ಪ್ರಯತ್ನಗಳಿಂದಾಗಿ 2012ರಲ್ಲಿ 32 ಮಕ್ಕಳೊಂದಿಗೆ ಮುಚ್ಚುವ ಹಂತದಲ್ಲಿದ್ದ ಶಾಲೆ ಇದೀಗ 110 ಮಕ್ಕಳ ಕಲಿಯುತ್ತಿದ್ದಾರೆ ಎನ್ನುತ್ತಾರೆ ಶಿಕ್ಷಕರು.
ಈ ವರ್ಷದಿಂದ ಸ್ಮಾರ್ಟ್ ಕ್ಲಾಸ್ ಮತ್ತು ಕಂಪ್ಯೂಟರ್ ತರಗತಿಗಳು ಆರಂಭವಾಗಲಿದೆ. ಇಬ್ಬರು ಆಂಗ್ಲ ವಿಷಯ ತಜ್ಞರು ಸ್ಪೋಕನ್ ಇಂಗ್ಲಿಷ್ ತರಬೇತಿ ನೀಡಲಿದ್ದಾರೆ. ನಿಮ್ಮ ಮಕ್ಕಳನ್ನು ಯಾವುದೇ ಖರ್ಚಿಲ್ಲದೆ ಶತಮಾನದ ಶಾಲೆಗೆ ಸೇರಿಸಿ ಎಂದು ಎಸ್ಡಿಎಂಸಿ ಅಧ್ಯಕ್ಷ ದೇವರಾಜು ಮನವಿ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು