ಕಾನ್ಸ್ಟೇಬಲ್ ಒಬ್ಬರು ದೆವ್ವಕ್ಕೆ ಹೆದರಿ ತಮ್ಮ ಪೊಲೀಸ್ ಕ್ವಾರ್ಟರ್ಸ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ನಡೆದಿದೆ.
ಪ್ರಭಾಕರನ್ ಮೃತ ಪೇದೆ ಈತ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದರು.
ಇವರು ಕನಸಿನಲ್ಲಿ ಬರುವ ದೆವ್ವಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಭಾಕರನ್ ಕನಸಿನಲ್ಲಿ ಬೆಂಕಿಯಲ್ಲಿ ಸುಟ್ಟುಹೋದ ಮಹಿಳೆಯೊಬ್ಬರು ಬಂದು ಕತ್ತು ಹಿಸುಕಲು ಪ್ರಯತ್ನಿಸಿದ್ದಳು. ಯಾಕೆ ತನಗೆ ಹೀಗೆ ಕನಸು ಬೀಳುತ್ತಿದೆ ಎಂಬ ಬಗ್ಗೆ ಪ್ರಭಾಕರನ್ ಜ್ಯೋತಿಷಿಯನ್ನು ಸಂಪರ್ಕಿಸಿದ್ದರು. ಅವರು ಇದು ಪ್ರೇತ ಕಾಟವಿರಬಹುದು ಎಂದಿದ್ದರು.
ಹೀಗಾಗಿ 15 ದಿನಗಳ ಕಾಲ ಅನಾರೋಗ್ಯದ ರಜೆ ಪಡೆದಿದ್ದ ಪ್ರಭಾಕರನ್ ತನ್ನ ಪೊಲೀಸ್ ಕ್ವಾರ್ಟರ್ಸ್ನ ಪೂಜಾ ಕೊಠಡಿಯಲ್ಲಿ ಬೀಗ ಹಾಕಿಕೊಂಡಿದ್ದರು.
ಪ್ರಭಾಕರನ್ ಪತ್ನಿ ಮತ್ತು ಮಕ್ಕಳನ್ನು ಸಂಬಂಧಿಕರ ಮನೆಗೆ ಹೋಗಿದ್ದರು. ಇವರು ಮನೆಗೆ ಹಿಂತಿರುಗಿದಾಗ ಪ್ರಭಾಕರನ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ ಆಗಿದ್ದರು.
ಕನಸಿನಲ್ಲಿ ಕಾಡುತ್ತಿದ್ದ ದೆವ್ವದ ಭಯದಿಂದ ಪ್ರಭಾಕರನ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕ್ವಾರ್ಟರ್ಸ್ನಲ್ಲಿ ಮಹಿಳೆಯೊಬ್ಬರು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದರು ಎಂದು ಪ್ರಭಾಕರನ್ ಮನೆಯವರ ಬಳಿ ಹೇಳಿದ್ದಾರೆ. ಈ ಕುರಿತಾಗಿ ಕಡಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ