ಕಾನ್ಸ್ಟೇಬಲ್ ಒಬ್ಬರು ದೆವ್ವಕ್ಕೆ ಹೆದರಿ ತಮ್ಮ ಪೊಲೀಸ್ ಕ್ವಾರ್ಟರ್ಸ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ನಡೆದಿದೆ.
ಪ್ರಭಾಕರನ್ ಮೃತ ಪೇದೆ ಈತ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದರು.
ಇವರು ಕನಸಿನಲ್ಲಿ ಬರುವ ದೆವ್ವಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಭಾಕರನ್ ಕನಸಿನಲ್ಲಿ ಬೆಂಕಿಯಲ್ಲಿ ಸುಟ್ಟುಹೋದ ಮಹಿಳೆಯೊಬ್ಬರು ಬಂದು ಕತ್ತು ಹಿಸುಕಲು ಪ್ರಯತ್ನಿಸಿದ್ದಳು. ಯಾಕೆ ತನಗೆ ಹೀಗೆ ಕನಸು ಬೀಳುತ್ತಿದೆ ಎಂಬ ಬಗ್ಗೆ ಪ್ರಭಾಕರನ್ ಜ್ಯೋತಿಷಿಯನ್ನು ಸಂಪರ್ಕಿಸಿದ್ದರು. ಅವರು ಇದು ಪ್ರೇತ ಕಾಟವಿರಬಹುದು ಎಂದಿದ್ದರು.
ಹೀಗಾಗಿ 15 ದಿನಗಳ ಕಾಲ ಅನಾರೋಗ್ಯದ ರಜೆ ಪಡೆದಿದ್ದ ಪ್ರಭಾಕರನ್ ತನ್ನ ಪೊಲೀಸ್ ಕ್ವಾರ್ಟರ್ಸ್ನ ಪೂಜಾ ಕೊಠಡಿಯಲ್ಲಿ ಬೀಗ ಹಾಕಿಕೊಂಡಿದ್ದರು.
ಪ್ರಭಾಕರನ್ ಪತ್ನಿ ಮತ್ತು ಮಕ್ಕಳನ್ನು ಸಂಬಂಧಿಕರ ಮನೆಗೆ ಹೋಗಿದ್ದರು. ಇವರು ಮನೆಗೆ ಹಿಂತಿರುಗಿದಾಗ ಪ್ರಭಾಕರನ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ ಆಗಿದ್ದರು.
ಕನಸಿನಲ್ಲಿ ಕಾಡುತ್ತಿದ್ದ ದೆವ್ವದ ಭಯದಿಂದ ಪ್ರಭಾಕರನ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕ್ವಾರ್ಟರ್ಸ್ನಲ್ಲಿ ಮಹಿಳೆಯೊಬ್ಬರು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದರು ಎಂದು ಪ್ರಭಾಕರನ್ ಮನೆಯವರ ಬಳಿ ಹೇಳಿದ್ದಾರೆ. ಈ ಕುರಿತಾಗಿ ಕಡಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
This website uses cookies.
Leave a Comment