Main News

ಮಾನವನ ಮೆದುಳಿಗೆ ರೋಬೋಟ್ ಚಿಪ್ – ಎಲೋನ್ ಮಸ್ಕ್

ನ್ಯೂರಾಲಿಂಕ್ (Neuralink) ಕಂಪನಿ ಮಾನವರ ಮೆದುಳಿಗೆ ಅಳವಡಿಸಬಹುದಾದ ರೋಬೋಟ್ ಚಿಪ್ (Chip) ಅನ್ನು ಶೀಘ್ರವೇ ಪರೀಕ್ಷಿಸಲಿದೆ ಎಂದು ವಿಶ್ವದ ಶ್ರೀಮಂತ ಎಲೋನ್ ಮಸ್ಕ್ (Elon Musk) ತಿಳಿಸಿದ್ದಾರೆ.

ಮಸ್ಕ್‌ನ ಸ್ಟಾರ್ಟ್ಅಪ್ ನ್ಯೂರಾಲಿಂಕ್ ನಿರ್ಮಿಸಿರುವ ಈ ಚಿಪ್ ಮನುಷ್ಯನಿಗೆ ಅಳವಡಿಸಲಾದಲ್ಲಿ ಆತ ತನ್ನ ಆಲೋಚನೆಗಳ ಮೂಲಕ ನೇರವಾಗಿ ಕಂಪ್ಯೂಟರ್‌ಗಳೊಂದಿಗೆ ಸಂವಹನ ನಡೆಸಲು ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ. ಈ ತಂತ್ರಜ್ಞಾನದ ಪರೀಕ್ಷೆಯ ಬಳಿಕ ಮಸ್ಕ್ ಸ್ವತಃ ಈ ಚಿಪ್ ಅನ್ನು ಹೊಂದಲು ಬಯಸಿರುವುದಾಗಿ ಮಸ್ಕ್ ಹೇಳಿದ್ದಾರೆ. 123 ಸ್ಥಾನ ಪಡೆದು JDS ಅಧಿಕಾರಕ್ಕೆ ಬಂದರೆ ದಲಿತ ಸಿಎಂ ಮಾಡಲು ನಾವು ಸಿದ್ಧ – ಹೆಚ್‌ಡಿಕೆ

ನ್ಯೂರಾಲಿಂಕ್ ಅಭಿವೃದ್ಧಿಪಡಿಸಿರುವ ಚಿಪ್ ಒಂದು ವೇಳೆ ಯಶಸ್ವಿಯಾದರೆ, ಇದು ಮಾನವನ ಮೆದುಳನ್ನು ನಿಯಂತ್ರಿಸಲು ಸಹಾಯ ಮಾಡಲಿದೆ. ಸ್ನಾಯುಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿರದ ವ್ಯಕ್ತಿಗಳೂ ಸಕ್ರಿಯರಾಗುತ್ತಾರೆ. ಮಾನವನ ಬೆನ್ನುಹುರಿ ತುಂಡಾಗಿದ್ದರೂ ಆತನ ದೇಹ ಸಂಪೂರ್ಣವಾಗಿ ಕೆಲಸ ಮಾಡಲು ಸಾಧ್ಯವಾಗಿಸುವ ಸಾಮರ್ಥ್ಯ ಇದೆ. ಆ ವ್ಯಕ್ತಿ ಮೆದುಳಿನಿಂದಲೇ ಯಂತ್ರಗಳ ಜೊತೆ ಸಂವಹಿಸಬಹುದು ಎಂದು ವರದಿಗಳು ತಿಳಿಸಿವೆ.

2019ರ ಜುಲೈನಲ್ಲಿ ನ್ಯೂರಾಲಿಂಕ್ 2020ರಲ್ಲಿಯೇ ಮಾನವರ ಮೇಲೆ ಈ ಚಿಪ್‌ನ ಮೊದಲ ಪರೀಕ್ಷೆ ನಡೆಸುವುದಾಗಿ ತಿಳಿಸಿತ್ತು. ಈಗಾಗಲೇ ಈ ನಾಣ್ಯದ ಗಾತ್ರದ ಚಿಪ್‌ಗಳನ್ನು ಪ್ರಾಣಿಗಳ ತಲೆಬುರುಡೆಗಳಲ್ಲಿ ಅಳವಡಿಸಿ ಪರೀಕ್ಷೆ ನಡೆಸಲಾಗಿದೆ.

ಈ ಚಿಪ್‌ಗೆ ಸಂಬಂಧಪಟ್ಟ ದಾಖಲೆಗಳನ್ನು ನಾವು ಎಫ್‌ಡಿಎಗೆ (ಅಮೆರಿಕದ ಫುಡ್ ಆಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್) ಸಲ್ಲಿಸಿದ್ದೇವೆ. ಅಲ್ಲಿಂದ ಅನುಮತಿ ಪಡೆದರೆ, ಇನ್ನು ಕೇವಲ 6 ತಿಂಗಳುಗಳಲ್ಲಿ ನಾವು ಮಾನವರಲ್ಲಿ ಮೊದಲ ಬಾರಿಗೆ ಚಿಪ್ ಅಳವಡಿಸಲು ಸಾಧ್ಯವಾಗಲಿದೆ ಎಂದು ಮಸ್ಕ್ ಹೇಳಿದ್ದಾರೆ.

Team Newsnap
Leave a Comment

Recent Posts

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024