Main News

ಅ. 24 ರಂದು ರಾಜ್ಯಾದ್ಯಂತ ‘ಕನ್ನಡಕ್ಕಾಗಿ ನಾವು’ವಿಶೇಷ ಕಾರ್ಯಕ್ರಮ : ಸಚಿವ ಸುನೀಲ್ ಕುಮಾರ್

66ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯದ ವಿವಿದೆಡೆ 7 ದಿನಗಳ ಕಾಲ ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನವನ್ನು ಆಚರಿಸಲು ನಿರ್ಧರಿಸಲಾಗಿದೆ.

ಈ ಅಭಿಯಾನದ ಅಂಗವಾಗಿ ಆಯೋಜಿಸಲಾಗುತ್ತಿರುವ ಕಾರ್ಯಕ್ರಮಗಳ ವಿವರಗಳನ್ನು ಇಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಬಿಡುಗಡೆ ಮಾಡುವರು.
‘ಮಾತಾಡ್ ಮಾತಾಡ್ ಕನ್ನಡ’ ಎನ್ನುವ ಘೋಷ ವಾಕ್ಯದ ಅಡಿಯಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ನಡೆಯಲಿವೆ.

  • ಅಕ್ಟೋಬರ್ 24ರಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಬೆಳಿಗ್ಗೆ 10ಗಂಟೆಗೆ ಮೈಸೂರು ರಂಗಾಯಣದಿಂದ ಡಾ. ಎಸ್.ಎಲ್. ಬೈರಪ್ಪ ನವರ ʻಪರ್ವʼ ನಾಟಕ ಪ್ರದರ್ಶನವಾಗಲಿದೆ.
  • ಬೆಂಗಳೂರು ನಾಟಕ ಅಕಾಡಮಿ ಯವರಿಂದ ಜಾಲಹಳ್ಳಿಯ ಬಿ.ಇ.ಎಲ್ ರಂಗಮಂದಿರದಲ್ಲಿ ರಂಗ ಪಯಣ ಪ್ರಸ್ತುತ ಪಡಿಸುವ ʻಗುಲಾಬಿ ಗ್ಯಾಂಗ್ʼ ನಾಟಕ ನಡೆಯಲಿದೆ.
  • ಅಕ್ಟೋಬರ್ 25ರಂದು ಸಂಜೆ 5ಗಂಟೆಗೆ ರವೀಂದ್ರ ಕಲಾ ಕ್ಷೇತ್ರದಲ್ಲಿʻ ಮೂಕನ ಮಕ್ಕಳುʼ ನಾಟಕ ಪ್ರದರ್ಶನವಾಗಲಿದೆ.
  • ಮಲ್ಲೇಶ್ವರಂನ ಎಮ್.ಇ.ಎಸ್ ಕಾಲೇಜ್ ಸಭಾಭವನದಲ್ಲಿ ದೃಶ್ಯಕಾವ್ಯ ಪ್ರಸ್ತುತ ಪಡಿಸುವ ʻಮಾಯಾಬೇಟೆʼ ನಾಟಕ ಪ್ರದರ್ಶನವಾಗಲಿದೆ.
  • ಅಕ್ಟೋಬರ್ 26 ಸಂಜೆ 6.30ಕ್ಕೆ ರಂದು ಶಿವಮೊಗ್ಗ ರಂಗಾಯಣದವರಿಂದ ಕಲಾಗ್ರಾಮದ ಸಾಂಸ್ಕೃತಿಕ ಸಮುಚ್ಛಯದಲ್ಲಿ ʻಚಾಣಕ್ಯ ಪ್ರಪಂಚʼ
  • ದಾವಣಗೆರೆ ವೃತಿ ರಂಗಾಯಣದಿಂದ ಸಂಜೆ 6.30ಕ್ಕೆ ರವೀಂದ್ರ ಕಲಾ ಕ್ಷೇತ್ರದಲ್ಲಿ ʻರಾಶಿ ಚಕ್ರʼ, ಶೇಷಾದ್ರಿಪುರಂ ಸಂಜೆ ಕಾಲೇಜಿನಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಪ್ರಸ್ತುತ ಪಡಿಸುವ ʻಶಿವರಾತ್ರಿʼ ನಾಟಕ ಹಾಗೂ ಮೈಸೂರು ರಂಗಾಯಣದಿಂದ ಪೀಣ್ಯದ ಬಿ.ಇ.ಎಲ್ ನಲ್ಲಿ ʻಮೂಕನ ಮಕ್ಕಳುʼ ನಾಟಕ ಪ್ರದರ್ಶನ ಗೊಳ್ಳಲಿದೆ.
  • ಅಕ್ಟೋಬರ್ 27ರಂದು ಸಂಜೆ 6.30ಕ್ಕೆ ಮೈಸೂರು ರಂಗಾಯಣದಿಂದ ಬೆಂಗಳೂರಿನ ಕಲ್ಯಾಣ ನಗರದ ಡಾ. ಶಿವಕುಮಾರಸ್ವಾಮಿ ಜ್ಞಾನಸೌಧದಲ್ಲಿ ʻಮೂಕನ ಮಕ್ಕಳು

ಕಲಾಗ್ರಾಮದ ಸಾಂಸ್ಕೃತಿಕ ಸಮುಚ್ಛಯದಲ್ಲಿ ದಾವಣಗೆರೆ ವೃತಿ ರಂಗಾಯಣದವರಿಂದ ʻಕನ್ನಡ ಕಲಿಯೋಣ ಬಾʼ ನಾಟಕ,

  • ಧಾರವಾಡ ರಂಗಾಯಣದವರಿಂದ ಮಲ್ಲೇಶ್ವರಂ ಕುವೆಂಪು ಸಭಾಂಗಣದಲ್ಲಿ ʻಕತ್ತಲೆಯ ಕೊರೊನಾʼ ನಾಟಕ ನಡೆಯಲಿದೆ.
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ವತಿಯಿಂದ ಮೆಜೆಸ್ಟಿಕ್ ಆರ್.ಎಂ.ಎಸ್. ಕನ್ನಡ ಸಂಘದಲ್ಲಿ ಮಹದೇವಯ್ಯ ತಂಡ ದವರಿಂದ ಸುಗಮ ಸಂಗೀತ ಕಾಯಕ್ರಮ ನಡೆಯಲಿದೆ.
  • ಅಕ್ಟೋಬರ್ 28ರಂದು ಸಂಜೆ 6.30ಕ್ಕೆ ಧಾರವಾಡ ರಂಗಾಯಣದವರಿಂದ ಕುರುಬಾರಹಳ್ಳಿಯ ರಾಜ್ ಕುಮಾರ್ ಸಭಾಂಗಣದಲ್ಲಿ ʻಕತ್ತಲೆ ಕರೊನಾʼ ನಾಟಕ, ಸುಚಿತ್ರ ಫಿಲಂ ಸೋಸೈಟಿಯಲ್ಲಿ ʻಶ್ರದ್ಧ ಮತ್ತು ಸ್ಟೇನ್ಲೆಸ್ ಸ್ಟೀಲ್ ಪಾತ್ರೆಗಳುʼ ನಾಟಕ
  • ಕಲಬುರಗಿ ರಂಗಾಯಣ ದವರಿಂದ ಆರ್ಪಿಸಿ ಬಡಾವಣೆಯ ಗ್ರಂಥಾಲಯ ಸಭಾಗಂಣದಲ್ಲಿ ಸಿರಿ ಪುರಂದರ ನಾಟಕ ನಡೆಯಲಿದೆ.
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ವತಿಯಿಂದ ರಾಜಾಜಿನಗರದ ಬಾಲಮೋಹನ ವಿದ್ಯಾಲಯದಲ್ಲಿ ಹೆಚ್.ಎನ್.ಮೀರಾ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.
  • ಅಕ್ಟೋಬರ್ 29ರಂದು ಸಂಜೆ 6.30ಕ್ಕೆ ಧಾರವಾಡ ರಂಗಾಯಣದವರಿಂದ ಬ್ಯಾಟರಾಯನಪುರ ನಗರಸಭಾ ಸಭಾಂಗಣದಲ್ಲಿ ʻಕತ್ತಲೆ ಕರೊನಾʼ ನಾಟಕ

*ಕಲಬುರಗಿ ರಂಗಾಯಣದಿಂದ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಛಯದಲ್ಲಿ ಸಿರಿ ಪುರಂದರ ನಾಟಕಗಳು ನಡೆಯಲಿದೆ.

  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ವತಿಯಿಂದ ವಿಜಯನಗರದ ಕರ್ನಾಟಕ ವಿದ್ಯುತ್ ಕಾರ್ಖಾನೆ ಸಂಘದಲ್ಲಿ ʻಸವಿಗಾನ ಲಹರಿʼ ಸಂಗೀತ ಕಾರ್ಯಕ್ರಮ ನಡೆಯಲಿದೆ.
  • ಅಕ್ಟೋಬರ್ 30ರಂದು ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರಿಂದ ಕಾಮಾಕ್ಷಿಪಾಳ್ಯದ ರಾಘವೇಂದ್ರ ಆಡಿಟೋರಿಯಂ ನಲ್ಲಿ ʻಕಾನಿನ ಪೌರಾಣಿಕʼ ನಾಟಕ ಪ್ರದರ್ಶನವಾಗಲಿದ.
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ಇವರಿಂದ ಕುಮಾರಸ್ವಾಮಿ ಲೇಔಟ್ ಕೇಂದ್ರ ಗಂಥಾಲಯದಲ್ಲಿ ʻ ಕನ್ನಡ ಗೀತೆಗಳುʼ ಎನ್ನುವ ಸಂಗೀತ ಕಾಯಕ್ರಮ ಹಮ್ಮಿಕೊಳ್ಳಲಾಗಿದೆ.
  • ಅಕ್ಟೋಬರ್ 31ರಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ಇವರಿಂದ ಮಲ್ಲೇಶ್ವರಂನ ಸೇವಾಸದನದಲ್ಲಿ ʻಕನ್ನಡ ಗೀತೆಗಳಿಗೆ ನೃತ್ಯʼ ಕಾಯಕ್ರಮ ನಡೆಯಲಿದೆ.
Team Newsnap
Leave a Comment
Share
Published by
Team Newsnap

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024