ಕಾಲೇಜಿಗೆ ಹೋಗುವೆ ಎಂದು ಹೇಳಿ ಮನೆಯಿಂದ ಬಂದ ವಿದ್ಯಾರ್ಥಿನಿ ಕಾಲೇಜಿಗೆ ಬಂಕ್ ಮಾಡಿ, ತನ್ನ ಗೆಳೆಯನೊಂದಿಗೆ ಜಲಾಶಯ ನೋಡಿ ವಾಪಾಸ್ ಬರುವಾಗ ಚಿಕ್ಕಬಳ್ಳಾಪುರ ಬಳಿ ಲಾರಿಯ ಚಕ್ರದಡಿ ಸಿಲುಕಿ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿದ್ದಾಳೆ.
ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಸೇತುವೆಯ ಕೆಳಭಾಗದಲ್ಲಿ ನಡೆದ ಅಪಘಾತದಲ್ಲಿ ಬೆಂಗಳೂರಿನ ವಿದ್ಯಾರ್ಥಿನಿ ಚೈತ್ರಾ ಸಾವನ್ನಪ್ಪಿದ್ದಾರೆ. ಮೃತ ಚೈತ್ರಾ ಕೆ.ಆರ್ ಪುರಂ ನಿವಾಸಿ. ಗೆಳೆಯ ನಿಖಿಲ್ ಗೌಡ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬೆಂಗಳೂರಿನ ಶೇಷಾದ್ರಿಪುರಂ ಕಾಂಪೋಸಿಟ್ ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ. ಬೆಳಗ್ಗೆ ಕಾಲೇಜಿಗೆ ಹೋಗ್ತೀನಿ ಅಂತ ಮನೆಯಿಂದ ಬಂದಿರೋ ಚೈತ್ರಾ ಕಾಲೇಜಿಗೆ ಹೋಗದೆ ತನ್ನ ಗೆಳೆಯ ಎಂಇಎಸ್ ಕಾಲೇಜಿನ ಬಿಕಾಂ ವಿದ್ಯಾರ್ಥಿ ಲಿಖಿತ್ ಗೌಡ ಜೊತೆ (ಕೆಎ 05 ಎಲ್ಡಿ 5029 ) ಆಕ್ಸಿಸ್ ಸ್ಕೂಟಿ ಮೂಲಕ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯಕ್ಕೆ ಜಾಲಿ ಟ್ರಿಪ್ಗೆ ಆಗಮಿಸಿದ್ದಳು.
ಕಾಲೇಜ್ ಬಂಕ್ ಮಾಡಿ ಮೃತ ಚೈತ್ರಾ ಹಾಗೂ ಲಿಖಿತ್ ಸೇರಿದಂತೆ ಆರು ಮಂದಿ ವಿದ್ಯಾರ್ಥಿಗಳು 3 ಬೈಕ್ ಗಳ ಮೂಲಕ ಶ್ರೀನಿವಾಸ ಸಾಗರ ಜಲಾಶಯಕ್ಕೆ ಆಗಮಿಸಿದ್ದರು. ತಲಕಾವೇರಿಯಲ್ಲಿ ಅ. 17 ರಂದು ಸಂಜೆ 7.21 ಕ್ಕೆ ತೀರ್ಥೋದ್ಭವ
ಜಲಾಶಯದ ಬಳಿ ಜಾಲಿ ರೌಂಡ್ಸ್ ಹಾಕಿ ಚಿಕ್ಕಬಳ್ಳಾಪುರ ನಗರದ ಮೂಲಕ ಮರಳಿ ಬೆಂಗಳೂರಿಗೆ ವಾಪಾಸ್ಸಾಗುವಾಗ ವಾಪಸಂದ್ರ ಸೇತುವೆ ಕೆಳಭಾಗದಲ್ಲಿ ಏಕಾಏಕಿ ಸ್ಕೂಟಿ ಚಾಲನೆ ಮಾಡ್ತಿದ್ದ ಲಿಖಿತ್ ಗೌಡ ಹೈವೆಗೆ ಎಂಟ್ರಿ ಕೊಟ್ಟಿದ್ದನಂತೆ. ಬಾಗೇಪಲ್ಲಿ ಕಡೆಯಿಂದ ಅತಿ ವೇಗವಾಗಿ ಬರ್ತಿದ್ದ ಕಲ್ಲು ಪುಡಿ ತುಂಬಿದ್ದ ಟಿಪ್ಪರ್ ಲಾರಿಗೆ ಸ್ಕೂಟಿಗೆ ಟಚ್ ಆಗಿದ್ದು, ಲಿಖಿತ್ ಗೌಡ ಹಾಗೂ ಚೈತ್ರಾ ಇಬ್ಬರು ರಸ್ತೆಗೆ ಬಿದ್ದಿದ್ದಾರೆ. ಚೈತ್ರಾ ಮೇಲೆ ಟಿಪ್ಪರ್ ಲಾರಿ ಹರಿದಿದೆ, ಚೈತ್ರಾ ಚಕ್ರದಡಿ ಸಿಲುಕಿ ನಜ್ಜುಗುಜ್ಜಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಳು ಘಟನೆಯಲ್ಲಿ ಲಿಖಿತ್ ಗೌಡ ಕಾಲಿಗೆ ಗಂಭೀರ ಗಾಯವಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment