January 14, 2026

Newsnap Kannada

The World at your finger tips!

kaveri,krs,student

ಕಾವೇರಿ ನದಿಗೆ ಹಾರಿದ ವಿದ್ಯಾರ್ಥಿ- ಕೊಚ್ಚಿ ಹೋದವನ ಪತ್ತೆಗೆ ಹುಡುಕಾಟ

Spread the love

ಮೈಸೂರಿನ ವಿದ್ಯಾರ್ಥಿಯೊಬ್ಬ ಮಂಡ್ಯದ ಕೆ ಆರ್ ಎಸ್ ಬಳಿ ಕಾವೇರಿ ನದಿಗೆ ಹಾರಿದ ಪರಿಣಾಮ ಆತ ರಭಸವಾದ ನೀರಿನೊಂದಿಗೆ ಕೊಚ್ಚಿಕೊಂಡು ಹೋದ ಘಟನೆ ಜರುಗಿದೆ.

ಆತನ ಸುಳಿವು ಇನ್ನೂ ಪತ್ತೆಯಾಗಿಲ್ಲ. ಮಂಡ್ಯ ಜಿಲ್ಲೆಯಲ್ಲಿರುವ ಕೆಆರ್​ಎಸ್ ಜಲಾಶಯ ನೋಡಲು ಬಂದಿದ್ದಾಗ ಇಂಥದ್ದೊಂದು ದುರಂತ ಜರುಗಿದೆ.ಇದನ್ನು ಓದಿ –ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಾವಲು ವಾಹನ ಪಲ್ಟಿ: ಇಬ್ಬರಿಗೆ ಗಾಯ

ಮೈಸೂರಿನ ಪಡುವಾರಹಳ್ಳಿಯ ಸೃಜನ್ (20) ನದಿಗೆ ಹಾರಿದ ವಿದ್ಯಾರ್ಥಿ. ಆತ ಯಾಕೆ ಹಾರಿದ ಎಂಬುದು ಇನ್ನೂ ನಿಗೂಢವಾಗಿದೆ.

ಸೃಜನ್ ಮಂಗಳವಾರ ಸ್ನೇಹಿತರೊಂದಿಗೆ ಕೆಆರ್​ಎಸ್​ ಜಲಾಶಯ ಮತ್ತು ಕಾವೇರಿ ನದಿಯನ್ನು ನೋಡಲು ಬಂದಿದ್ದ.

ಕೆಆರ್​ಎಸ್​ ಗೇಟ್​ನಿಂದ ಸುಮಾರು 150 ಮೀಟರ್ ದೂರದಲ್ಲಿ ನಿಂತು ನೋಡುತ್ತಿದ್ದ ಈತ ಏಕಾಏಕಿ ಕಾವೇರಿ ನದಿಗೆ ಧುಮುಕಿದ್ದಾನೆ. ಭೋರ್ಗರೆಯುತ್ತಿರುವ ನದಿಯ ಹರಿವಿನ ರಭಸಕ್ಕೆ ಈತ ಕೊಚ್ಚಿಕೊಂಡು ಹೋಗಿದ್ದಾನೆ.

ಸ್ನೇಹಿತರು ಈ ಕುರಿತು ಆತನ ಮನೆಯವರಿಗೆ ಸುದ್ದಿ ಮುಟ್ಟಿಸಿದ್ದಾರೆ. ಇನ್ನೂ ಆತನ ಪತ್ತೆಯಾಗಿಲ್ಲ. ನಾಳೆ ಸೃಜನ್​ಗಾಗಿ ಶೋಧ ಕಾರ್ಯ ನಡೆಯಲಿದೆ.

ಕೆಆರ್​ಎಸ್​ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!