ಮೈಸೂರಿನ ವಿದ್ಯಾರ್ಥಿಯೊಬ್ಬ ಮಂಡ್ಯದ ಕೆ ಆರ್ ಎಸ್ ಬಳಿ ಕಾವೇರಿ ನದಿಗೆ ಹಾರಿದ ಪರಿಣಾಮ ಆತ ರಭಸವಾದ ನೀರಿನೊಂದಿಗೆ ಕೊಚ್ಚಿಕೊಂಡು ಹೋದ ಘಟನೆ ಜರುಗಿದೆ.
ಆತನ ಸುಳಿವು ಇನ್ನೂ ಪತ್ತೆಯಾಗಿಲ್ಲ. ಮಂಡ್ಯ ಜಿಲ್ಲೆಯಲ್ಲಿರುವ ಕೆಆರ್ಎಸ್ ಜಲಾಶಯ ನೋಡಲು ಬಂದಿದ್ದಾಗ ಇಂಥದ್ದೊಂದು ದುರಂತ ಜರುಗಿದೆ.ಇದನ್ನು ಓದಿ –ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಾವಲು ವಾಹನ ಪಲ್ಟಿ: ಇಬ್ಬರಿಗೆ ಗಾಯ
ಮೈಸೂರಿನ ಪಡುವಾರಹಳ್ಳಿಯ ಸೃಜನ್ (20) ನದಿಗೆ ಹಾರಿದ ವಿದ್ಯಾರ್ಥಿ. ಆತ ಯಾಕೆ ಹಾರಿದ ಎಂಬುದು ಇನ್ನೂ ನಿಗೂಢವಾಗಿದೆ.
ಸೃಜನ್ ಮಂಗಳವಾರ ಸ್ನೇಹಿತರೊಂದಿಗೆ ಕೆಆರ್ಎಸ್ ಜಲಾಶಯ ಮತ್ತು ಕಾವೇರಿ ನದಿಯನ್ನು ನೋಡಲು ಬಂದಿದ್ದ.
ಕೆಆರ್ಎಸ್ ಗೇಟ್ನಿಂದ ಸುಮಾರು 150 ಮೀಟರ್ ದೂರದಲ್ಲಿ ನಿಂತು ನೋಡುತ್ತಿದ್ದ ಈತ ಏಕಾಏಕಿ ಕಾವೇರಿ ನದಿಗೆ ಧುಮುಕಿದ್ದಾನೆ. ಭೋರ್ಗರೆಯುತ್ತಿರುವ ನದಿಯ ಹರಿವಿನ ರಭಸಕ್ಕೆ ಈತ ಕೊಚ್ಚಿಕೊಂಡು ಹೋಗಿದ್ದಾನೆ.
ಸ್ನೇಹಿತರು ಈ ಕುರಿತು ಆತನ ಮನೆಯವರಿಗೆ ಸುದ್ದಿ ಮುಟ್ಟಿಸಿದ್ದಾರೆ. ಇನ್ನೂ ಆತನ ಪತ್ತೆಯಾಗಿಲ್ಲ. ನಾಳೆ ಸೃಜನ್ಗಾಗಿ ಶೋಧ ಕಾರ್ಯ ನಡೆಯಲಿದೆ.
ಕೆಆರ್ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ