ಕಳ್ಳನೊಬ್ಬ ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಪೊಲೀಸರ ವಾಹನವನ್ನೇ ಕದ್ದ ಘಟನೆ ಧಾರವಾಡದ ಅಣ್ಣಿಗೆರೆ ಯಲ್ಲಿ ಜರುಗಿದೆ
ಅಣ್ಣಿಗೇರಿ ನಗರದ ನಾಗಪ್ಪ ಹಡಪದ ಬಂಧಿತ ಆರೋಪಿ.
ನಾಗಪ್ಪ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ನಿಂತಿದ್ದ ಬೋಲೆರೊ ವಾಹನವನ್ನು ಕಳ್ಳತನ ಮಾಡಿದ್ದಾನೆ.
ನಂತರ ಅದನ್ನು ಹಾವೇರಿ ಜಿಲ್ಲೆಯ ಬ್ಯಾಡಗಿವರೆಗೆ ತೆಗೆದುಕೊಂಡು ಹೋಗಿದ್ದಾನೆ.
ನಿನ್ನೆ ಬೆಳಗಿನ ಜಾವ 4 ಗಂಟೆಗೆ ವಾಹನ ತೆಗೆದುಕೊಂಡು ಪರಾರಿಯಾಗಿದ್ದ ನಾಗಪ್ಪ ಬ್ಯಾಡಗಿವರೆಗೆ ಹೋಗಿರುವ ವಿಷಯವನ್ನು ಪೊಲೀಸರು ತಿಳಿದಿದ್ದಾರೆ.
ಆತನೂ ಸೇರಿದಂತೆ ವಾಹನವನ್ನು ಬ್ಯಾಡಗಿಯಲ್ಲೇ ಹಿಡಿದಿದ್ದಾರೆ. ಸದ್ಯ ಪೊಲೀಸರು ಬ್ಯಾಡಗಿಯಿಂದ ಪೊಲೀಸ್ ಜಿಪ್ ಹಾಗೂ ನಾಗಪ್ಪನನ್ನು ಕರೆತಂದು ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ