ಆಸ್ತಿಗಾಗಿ ಸ್ವಂತ ಅಕ್ಕನನ್ನೇ ಪೆಟ್ರೋಲ್ ಹಾಕಿ ಸುಟ್ಟ ದಾರುಣ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯ ವಾಡಿಯಾರಾಮ್ ಗ್ರಾಮದಲ್ಲಿ ನಡೆದಿದೆ.
ವರಲಕ್ಷ್ಮಿ ಮತ್ತು ರಾಜೇಶ್ವರಿ ಎಂಬ ಇಬ್ಬರು ಸಹೋದರಿಯರ ಮಧ್ಯೆ ಆಸ್ತಿ ಹಂಚಿಕೆ ವಿಚಾರವಾಗಿ ನಿತ್ಯ ಜಗಳ ನಡೆಯುತ್ತಿತ್ತು
ವರಲಕ್ಷ್ಮಿ ಸಹೋದರಿ ರಾಜೇಶ್ವರಿ ಮೇಲೆ ಒಂದು ಬಾಟೆಲ್ನಲ್ಲಿ ಪೆಟ್ರೋಲ್ ತಂದು ಸುರಿದು ಬೆಂಕಿ ಹಚ್ಚಿದ್ದಾಳೆ.
ಗಂಭೀರವಾಗಿ ಗಾಯಗೊಂಡ ವರಲಕ್ಷ್ಮಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಎಂದು ಚೇಗುಂಟಾ ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಚ್ಛೇದಿತರಾಗಿರುವ ವರಲಕ್ಷ್ಮಿ ಮತ್ತು ಆಕೆಯ ತಂಗಿ ರಾಜೇಶ್ವರಿ ಕಾಮರೆಡ್ಡಿ ಜಿಲ್ಲೆಯಲ್ಲಿ ತಮ್ಮ ಪೋಷಕರ ಒಡೆತನದ ಐದು ಎಕರೆ ಭೂಮಿಯನ್ನು ಹಂಚಿಕೊಳ್ಳುವ ಬಗ್ಗೆ ಜಗಳವಾಡುತ್ತಿದ್ದರು. ಅದರಂತೆ ಮೊನ್ನೆ ರಾಜೇಶ್ವರಿ ವರಲಕ್ಷ್ಮಿ ಮನೆಗೆ ಬಂದಿದ್ದಳು. ಈ ವೇಳೆ ಆಸ್ತಿ ಹಂಚಿಕೆ ವಿಚಾರವಾಗಿ ಸಹೋದರಿಯರ ನಡುವೆ ಜಗಳ ನಡೆದಿದೆ. ಆಗ ರಾಜೇಶ್ವರಿ ತಂದಿದ್ದ ಪೆಟ್ರೋಲ್ ವರಲಕ್ಷ್ಮಿ ಮೇಲೆ ಸುರಿದು ಬೆಂಕಿ ಹಚ್ಚಿದ್ದಾಳೆ.
ಬೆಂಕಿ ಜೋರಾಗಿ ಹತ್ತಿಕೊಳ್ಳುತ್ತಿದ್ದಂತೆ ವರಲಕ್ಷ್ಮೀ ಸಹೋದರಿ ರಾಜೇಶ್ವರಿಯನ್ನ ತಬ್ಬಿಕೊಂಡಿದ್ದಾಳೆ ಇದನ್ನು ಗಮನಿಸಿದ ಸ್ಥಳೀಯರು ಓಡಿ ಬಂದು ಇಬ್ಬರನ್ನೂ ರಕ್ಷಿಸುವ ಪ್ರಯತ್ನ ಮಾಡಿದ್ದಾರೆ.
ಆದರೆ ವರಲಕ್ಷ್ಮಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ರಾಜೇಶ್ವರಿ ಸುಟ್ಟಗಾಯಗಳಿಂದ ಬಳಲುತ್ತಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಅಂತಾ ಪೊಲೀಸರು ಮಾಹಿತಿ ನೀಡಿದ್ದಾರೆ.
- ವೈದ್ಯರ ನಿರ್ಲಕ್ಷ್ಯ : 19 ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಸಾವು
- ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್ ನ ಒಂದೇ ಕುಟುಂಬದ 7 ಜನ ದುರಂತ ಸಾವು
- IPL ಪಂದ್ಯದ ಸಮಾರೋಪದಲ್ಲಿ ಮಂಡ್ಯ – ಶಿವಮೊಗ್ಗ ಕಲಾವಿದರಿಂದ ಪೂಜಾ ಕುಣಿತ, ಡೊಳ್ಳು ಕುಣಿತ
- ನಾಲ್ವರು ಭಾರತೀಯರು ಸೇರಿ 22 ಪ್ರಯಾಣಿಕರಿದ್ದ ವಿಮಾನ ಕಣ್ಮರೆ
- ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್
More Stories
ವೈದ್ಯರ ನಿರ್ಲಕ್ಷ್ಯ : 19 ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಸಾವು
ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್ ನ ಒಂದೇ ಕುಟುಂಬದ 7 ಜನ ದುರಂತ ಸಾವು
ವರದಕ್ಷಿಣೆ ಕಿರುಕುಳ : ಇಬ್ಬರು ಮಕ್ಕಳು ಸೇರಿ ಮೂವರು ಸಹೋದರಿಯರು ಬಾವಿಗೆ ಹಾರಿ ಆತ್ಮಹತ್ಯೆ