ಆಸ್ತಿಗಾಗಿ ಸ್ವಂತ ಅಕ್ಕನನ್ನೇ ಪೆಟ್ರೋಲ್ ಹಾಕಿ ಸುಟ್ಟ ದಾರುಣ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯ ವಾಡಿಯಾರಾಮ್ ಗ್ರಾಮದಲ್ಲಿ ನಡೆದಿದೆ.
ವರಲಕ್ಷ್ಮಿ ಮತ್ತು ರಾಜೇಶ್ವರಿ ಎಂಬ ಇಬ್ಬರು ಸಹೋದರಿಯರ ಮಧ್ಯೆ ಆಸ್ತಿ ಹಂಚಿಕೆ ವಿಚಾರವಾಗಿ ನಿತ್ಯ ಜಗಳ ನಡೆಯುತ್ತಿತ್ತು
ವರಲಕ್ಷ್ಮಿ ಸಹೋದರಿ ರಾಜೇಶ್ವರಿ ಮೇಲೆ ಒಂದು ಬಾಟೆಲ್ನಲ್ಲಿ ಪೆಟ್ರೋಲ್ ತಂದು ಸುರಿದು ಬೆಂಕಿ ಹಚ್ಚಿದ್ದಾಳೆ.
ಗಂಭೀರವಾಗಿ ಗಾಯಗೊಂಡ ವರಲಕ್ಷ್ಮಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಎಂದು ಚೇಗುಂಟಾ ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಚ್ಛೇದಿತರಾಗಿರುವ ವರಲಕ್ಷ್ಮಿ ಮತ್ತು ಆಕೆಯ ತಂಗಿ ರಾಜೇಶ್ವರಿ ಕಾಮರೆಡ್ಡಿ ಜಿಲ್ಲೆಯಲ್ಲಿ ತಮ್ಮ ಪೋಷಕರ ಒಡೆತನದ ಐದು ಎಕರೆ ಭೂಮಿಯನ್ನು ಹಂಚಿಕೊಳ್ಳುವ ಬಗ್ಗೆ ಜಗಳವಾಡುತ್ತಿದ್ದರು. ಅದರಂತೆ ಮೊನ್ನೆ ರಾಜೇಶ್ವರಿ ವರಲಕ್ಷ್ಮಿ ಮನೆಗೆ ಬಂದಿದ್ದಳು. ಈ ವೇಳೆ ಆಸ್ತಿ ಹಂಚಿಕೆ ವಿಚಾರವಾಗಿ ಸಹೋದರಿಯರ ನಡುವೆ ಜಗಳ ನಡೆದಿದೆ. ಆಗ ರಾಜೇಶ್ವರಿ ತಂದಿದ್ದ ಪೆಟ್ರೋಲ್ ವರಲಕ್ಷ್ಮಿ ಮೇಲೆ ಸುರಿದು ಬೆಂಕಿ ಹಚ್ಚಿದ್ದಾಳೆ.
ಬೆಂಕಿ ಜೋರಾಗಿ ಹತ್ತಿಕೊಳ್ಳುತ್ತಿದ್ದಂತೆ ವರಲಕ್ಷ್ಮೀ ಸಹೋದರಿ ರಾಜೇಶ್ವರಿಯನ್ನ ತಬ್ಬಿಕೊಂಡಿದ್ದಾಳೆ ಇದನ್ನು ಗಮನಿಸಿದ ಸ್ಥಳೀಯರು ಓಡಿ ಬಂದು ಇಬ್ಬರನ್ನೂ ರಕ್ಷಿಸುವ ಪ್ರಯತ್ನ ಮಾಡಿದ್ದಾರೆ.
ಆದರೆ ವರಲಕ್ಷ್ಮಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ರಾಜೇಶ್ವರಿ ಸುಟ್ಟಗಾಯಗಳಿಂದ ಬಳಲುತ್ತಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಅಂತಾ ಪೊಲೀಸರು ಮಾಹಿತಿ ನೀಡಿದ್ದಾರೆ.
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment