ಮೊಬೈಲ್ ಕೆಟ್ಟು ಹೋಗಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಜಿಲ್ಲೆಯ ಯರಗನಹಳ್ಳಿಯ ಜನತಾ ಕಾಲೋನಿಯಲ್ಲಿ ಜರುಗಿದೆ, ಮಹೇಂದ್ರ( 22) ನೇಣಿಗೆ ಶರಣಾದ ಯುವಕ.
ಇತ್ತೀಚಿಗೆ ಮೃತ ಯುವಕನ ಮೊಬೈಲ್ ನೀರಿಗೆ ಬಿದ್ದು ಕೆಟ್ಟು ಹೋಗಿತ್ತು. ಅದನ್ನು ರಿಪೇರಿ ಮಾಡಿಸಲು ಆತನ ಬಳಿ ಹಣ ಇರಲಿಲ್ಲ ಎನ್ನಲಾಗಿದ್ದು ಇದರಿಂದ ಬೇಸತ್ತು ಯುವಕ ನೇಣಿಗೆ ಕೊರಳೊಡ್ಡಿದ್ದಾನೆ ಎನ್ನಲಾಗಿದೆ.
ಚಿಕನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮೊಬೈಲ್ ಗೇಮ್ಸ್ಗಳಿಗೆ ತುಂಬಾ ಅಡಿಟ್ ಆಗಿದ್ದ ಎನ್ನಲಾಗಿದೆ.
ಈ ಮೊದಲು ಸಾಲ ಮಾಡಿಕೊಂಡು ಆರ್ಥಿಕ ಸಮಸ್ಯೆಯಲ್ಲಿದ್ದ ಯುವಕನಿಗೆ ಮೊಬೈಲ್ ರಿಪೇರಿ ಮಾಡಿಸಿಕೊಳ್ಳಲು ಸಾಧ್ಯವಾಗದೆ ಮಾನಸಿಕವಾಗಿ ನೊಂದಿದ್ದ.
ತನ್ನ ಮನೆಯ ಪಕ್ಕದಲ್ಲೇ ಇರುವ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ಕುರಿತು ಮೈಸೂರು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.