ತುಂಬಿ ಹರಿಯುವ ಕಪಿಲಾ ನದಿಯಲ್ಲಿ ಈಜಲು ಹೋದ ಯುವಕ ನಾಪತ್ತೆ

Team Newsnap
0 Min Read

ತುಂಬಿ ಹರಿಯುತ್ತಿರುವ ಕಪಿಲೆಯಲ್ಲಿ ಈಜಲು ತೆರಳಿ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ಜರುಗಿದೆ. ಅಹಮದ್ ಕರೀಂ ನಾಪತ್ತೆಯಾದ ಯುವಕ. ನಂಜನಗೂಡು ತಾಲೂಕು ಹೆಜ್ಜಿಗೆ ಗ್ರಾಮದ ಕಪಿಲೆ ಬಳಿ ನಡೆದಿದೆ.

ಹೆಜ್ಜಿಗೆ ಸೇತುವೆಯಿಂದ ಮೂವರು ಯುವಕರು ನದಿಗೆ ಹಾರಿ ಹುಚ್ಚಾಟ ಮೆರೆದಿದ್ದಾರೆ. ಇದರಲ್ಲಿ ಇಬ್ಬರು ಈಜಿ ದಡ ಸೇರಿದರೆ ಕರೀಂ ನಾಪತ್ತೆಯಾಗಿದ್ದಾನೆ.

ಕುತೂಹಲಕ್ಕೆ ಕಾರಣವಾದ ಲಕ್ಷ್ಮೀ ಹೆಬ್ಬಾಳ್ಕರ್, ಬಿಎಸ್ ಯಡಿಯೂರಪ್ಪ ಭೇಟಿ

ಸದ್ಯ ಅಹಮದ್ ಕರೀಂಗಾಗಿ ನದಿಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ನಂಜನಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article
Leave a comment