ಮನೆಯವರಿಂದ ಪ್ರೀತಿಗೆ ತೀವ್ರ ವಿರೋಧ ನಡುವೆಯೂ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಯುವತಿ ತನ್ನ ಪ್ರಿಯತಮನೊಂದಿಗೆ ವಿಷ ಸೇವಿಸಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಘಟನೆ ಹಾವೇರಿ ಜಿಲ್ಲೆಯ ನಾಗನೂರು ಗ್ರಾಮದಲ್ಲಿ ಭಾನುವಾರ ಜರುಗಿದೆ.
ಇರ್ಷಾದ್ (23) ವಿದ್ಯಾಶ್ರೀ (22) ಆತ್ಮಹತ್ಯೆ ಮಾಡಿಕೊಂಡವರು.
ವಿದ್ಯಾಶ್ರೀ , ಇರ್ಷಾದ್ ಬಹುವಾಗಿ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಕುಟುಂಬದವರ ವಿರೋಧವಿತ್ತು. ಇದೇ ವೇಳೆ ಮನೆಯವರೆಲ್ಲರೂ ಸೇರಿ ಬೇರೊಬ್ಬ ಯುವಕನೊಂದಿಗೆ ವಿದ್ಯಾಶ್ರೀಗೆ ನಿಶ್ಚಿತಾರ್ಥ ಮಾಡಿದ್ದರು.
ಯುವತಿ ನಿಶ್ಚಿತಾರ್ಥ ಮುಗಿದ ಬೆನ್ನಲ್ಲೇ ಇರ್ಷಾದ್ ಜೊತೆ ಪರಾರಿಯಾಗಿದ್ದಳು. ಮಗಳು ನಾಪತ್ತೆಯಾಗಿದ್ದಾಳೆ ಎಂದು ಕುಟುಂಬಸ್ಥರು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಆದರೆ ಇರ್ಷಾದ್ ಹಾಗೂ ವಿದ್ಯಾಶ್ರೀ ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇರ್ಷಾದ್ ಜಮೀನಿನಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ