ಕೆರೆಯ ಬಳಿ ರೀಲ್ಸ್ ಮಾಡಲು ಹೋದ ಯುವತಿ ಕೆರೆಗೆ ಉರುಳಿ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗಾನಹಳ್ಳಿ ಗ್ರಾಮದ ಬಳಿ ಭಾನುವಾರ ಜರುಗಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ನಿಗೂಢ ನಾಪತ್ತೆ – ಪ್ರಾಂಶುಪಾಲರ ಸಸ್ಪೆಂಡ್ ಗೆ ಡಿಸಿ ಕ್ರಮ ?
ಮೂಲತಃ ಶಿಡ್ಲಘಟ್ಟ ತಾಲೂಕಿನ ಗಾಜಿಲುವಾರುಪಲ್ಲಿ ಗ್ರಾಮದ ಎಂಎ ಪದವೀಧರೆ ಅಮೃತ(22) ಮೃತ ಯುವತಿ.
ಜಂಬಿಗೆ ಮರದಹಳ್ಳಿಯ ನೆಂಟರ ಮನೆಯ ಗೃಹಪ್ರವೇಶದ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಯುವತಿ ಅಮೃತ ಗಂಗಾನಹಳ್ಳಿ ಕೆರೆ. ಕೋಡಿ ಹರಿಯುತ್ತಿರುವ ವಿಚಾರ ತಿಳಿದು ಮತ್ತೋರ್ವ ಯುವತಿಯ ಜೊತೆ ಕೆರೆ ಬಳಿ ತೆರಳಿದ್ದಳು.
ಈ ವೇಳೆ ಜೊತೆಯಲ್ಲಿದ್ದ ಯುವತಿಗೆ ವೀಡಿಯೋ ಮಾಡಲು ಹೇಳಿ ಮೊಬೈಲ್ ನೀಡಿ ಕೆರೆಯ ಅಂಚಿನ ದಿಂಡಿನ ಮೇಲೆ ತೆರಳಿದ್ದಳು. ಆದರೆ ಈ ವೇಳೆ ಆಕಸ್ಮಿಕ ಕಾಲು ಜಾರಿ ಕೆರೆಗೆ ಅಮೃತಾ ಉರುಳಿಬಿದ್ದು ಸಾವನ್ನಪ್ಪಿದ್ದಾಳೆ.
ಗುಡಿಬಂಡೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್