ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅಭಿಷೇಕ್ ಬಚ್ಚನ್ ಗಾಯಗೊಂಡಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ, ಬಾಲಿವುಡ್ ಬಿಗ್ ಬಿ ಪುತ್ರನ ಬಲಗೈ ಮತ್ತು ಬೆರಳುಗಳಿಗೆ ಗಾಯಗಳಾಗಿವೆ. ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ.
ಗಾಬರಿಯಾಗುವ ಅಗತ್ಯವಿಲ್ಲವೆಂದೂ ಹೇಳಿದ್ದಾರೆ. ಕೆಲ ದಿನಗಳ ವಿಶ್ರಾಂತಿಗೆ ಸಲಹೆ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಹಿರಿಯ ನಟ ಅಮಿತಾಬ್ ಬಚ್ಚನ್ ಪುತ್ರಿ ಶ್ವೇತಾ ನಂದಾರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿ ಮಗನ ಆರೋಗ್ಯ ವಿಚಾರಿಸಿದರು.
ಅಭಿಷೇಕ್ ಪತ್ನಿ ಐಶ್ವರ್ಯಾರೈ ಬಚ್ಚನ್ ಮಣಿರತ್ನಂ ಚಿತ್ರದ ಚಿತ್ರೀಕರಣಕ್ಕೆಂದು ಮಧ್ಯಪ್ರದೇಶಕ್ಕೆ ತೆರಳಿದ್ದಾರೆಂದು ವರದಿಯಾಗಿದೆ.
ಹಿಂದಿಗೆ ರಿಮೇಕ್ ಆಗುತ್ತಿರುವ ತಮಿಳಿನ ಓಟು ಸೇರಪ್ಪು ಸೈಜ್ 7 ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ವೇಳೆ ಅಭಿಷೇಕ್ ಬಚ್ಚನ್ ಗಾಯಗೊಂಡಿದ್ದಾರೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!