Main News

ಕೊರೊನಾ ಲಸಿಕೆ ಪಡೆದರೆ ಶೇ. 97. 5 ರಷ್ಟು ಸಾವಿನ‌ ಸಾಧ್ಯತೆ ಇಲ್ಲ : ಅಧ್ಯಯನ ವರದಿ

ಕರೊನಾ ಲಸಿಕೆಯ ಮೊದಲ ಡೋಸ್ ಸಾವಿನ ಸಾಧ್ಯತೆಯನ್ನು ಶೇಕಡ 97.5ರಷ್ಟು ತಡೆಯುತ್ತದೆ ಹಾಗೂ 2ನೇ ಡೋಸ್​ನ ಪರಿಣಾಮ ಶೇ, 97.5ರಷ್ಟಿರುತ್ತದೆ ಎಂದು ಹೊಸ ಅಧ್ಯಯನದಿಂದ ಮಾಹಿತಿ ಬಹಿರಂಗವಾಗಿದೆ.

ಏಪ್ರಿಲ್-ಮೇನಲ್ಲಿ ಎರಡನೇ ಅಲೆ ವೇಳೆ ಲಸಿಕೆ ಪಡೆಯದವರಲ್ಲೇ ಹೆಚ್ಚಿನ ಮರಣ ದಾಖಲಾಗಿದೆ.
ಹೀಗಾಗಿ ಸೋಂಕು ತಡೆಗೆ ಲಸಿಕೆ ಪರಿಣಾಮಕಾರಿ ಎಂಬುದು ಋಜುವಾತಾಗಿದೆ ಎಂದು ಸರ್ಕಾರ ಪ್ರತಿಪಾದಿಸಿದೆ. ‘

ವೈರಸ್ ವಿರುದ್ಧ ವ್ಯಾಕ್ಸಿನ್ ಅತ್ಯಂತ ಮಹತ್ವದ ಗುರಾಣಿಯಾಗಿದೆ’ ಎಂದು ಕೋವಿಡ್ ಟಾಸ್ಕ್ ಫೋರ್ಸ್ ಮುಖ್ಯಸ್ಥ ವಿ.ಕೆ. ಪೌಲ್ ಹೇಳಿದ್ದಾರೆ.

ಕರೊನಾ ತಡೆಗಾಗಿ ಮೂಗಿನ ಮೂಲಕ ನೀಡುವಂಥ ಭಾರತ್ ಬಯೋಟೆಕ್​ನ ಬಿಬಿವಿ154 ಲಸಿಕೆಯ ಎರಡು ಮತ್ತು ಮೂರನೇ ಹಂತದ ಪರೀಕ್ಷೆಗಳನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್), ಲಿವರ್ ಆಂಡ್ ಬಿಲಿಯರಿ ಸೈನ್ಸಸ್ ಸಂಸ್ಥೆ ಹಾಗೂ ಗುರುನಾನಕ್ ಆಸ್ಪತ್ರೆ, ಹರಿಯಾಣದ ಪಲ್ವಾಲ್​ನಲ್ಲಿರುವ ಇನ್​ಕ್ಲೆನ್ ಆಸ್ಪತ್ರೆಗಳಲ್ಲಿ ನಡೆಸಲಾಗುತ್ತದೆ. ಎರಡರಿಂದ ಮೂರು ವಾರಗಳಲ್ಲಿ ಪರೀಕ್ಷೆ ಆರಂಭವಾಗುವ ನಿರೀಕ್ಷೆಯಿದೆ.

18-60 ವಯೋಗುಂಪಿನ ಆರೋಗ್ಯ ಸ್ವಯಂಸೇವಕರಲ್ಲಿ ಜೂನ್ ತಿಂಗಳಲ್ಲೇ ಭಾರತ್ ಬಯೋಟೆಕ್ ಮೊದಲ ಹಂತದ ಕ್ಲಿನಿಕಲ್ ಟ್ರಯಲ್ ಪೂರ್ಣಗೊಳಿಸಿದೆ.

ವೃದ್ಧರಲ್ಲಿ ಕೇಸ್ ಜಾಸ್ತಿ

ಲಸಿಕೆಯ ಸಂಪೂರ್ಣ ಡೋಸ್ ಪಡೆದರೂ ಕೋವಿಡ್ ಸೋಂಕು ತಗಲುವ ಅಪಾಯ ವೃದ್ಧರು ಹಾಗೂ ಅನ್ಯವ್ಯಾಧಿಗಳಿಂದ ಬಳಲುತ್ತಿರುವವರಲ್ಲಿ ಜಾಸ್ತಿಯಿದೆ. ಸಂಪೂರ್ಣ ಲಸಿಕೆ ಪಡೆದವರಲ್ಲಿ ಕರೊನಾ ಸೋಂಕು ದೃಢಪಟ್ಟ 12,908 ಗಂಭೀರ ಪ್ರಕರಣಗಳು ಆಗಸ್ಟ್ 30ರ ವರೆಗೆ ತನಗೆ ಬಂದಿವೆ.

ಸುಮಾರು ಶೇ. 70 ರಷ್ಟು ಪ್ರಕರಣಗಳು 65 ವರ್ಷ ಮೇಲ್ಪಟ್ಟ ವಯಸ್ಕರಲ್ಲಿ ಕಂಡು ಬಂದಿದೆ. ಮೃತಪಟ್ಟವರಲ್ಲಿ ಶೇ. 87ರಷ್ಟು ಮಂದಿ ಕೂಡ 65 ವರ್ಷ ಮೇಲಿನವರು ಎಂದೂ ಸಿಡಿಸಿ ಹೇಳಿದೆ.

Team Newsnap
Leave a Comment
Share
Published by
Team Newsnap

Recent Posts

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024