ಕನಕಪುರ ತಾಲ್ಲೂಕಿನ ಅರೇಹೊಸಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಹಾಗೂ ಚುನಾವಣೆ ನಡೆಸಲು ಚುನಾವಣಾಧಿಕಾರಿ ನೇಮಿಸುವಂತೆ ಕೋರಿ ಡೇರಿಯ ಸಿಇಒ ಗೀತಾ ಇಲಾಖೆಗೆ ಮನವಿ ಸಲ್ಲಿಸಿದ್ದರು.ಈ ಕೆಲಸ ಮಾಡಿಕೊಡಲು ಆರೋಪಿ ಶಿವಾನಂದ 8 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಇದನ್ನು ಓದಿ : ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ಗೆ ಬಂಧನ: ಜೈಲು
ಗೀತಾ ಈ ಸಂಬಂಧ ಎಸಿಬಿಗೆ ದೂರು ನೀಡಿದ್ದರು. ಗುರುವಾರ ಮಧ್ಯಾಹ್ನ ರಾಮನಗರದ ಸಹಾಯಕ ನಿಬಂಧಕರ ಕಚೇರಿಯಲ್ಲಿ ಆರೋಪಿಯು ಮಾಗಡಿಯ ಕೃಷಿ ಪತ್ತಿನ ಸಹಕಾರ ಸಂಘವೊಂದರ ಕಾರ್ಯದರ್ಶಿ ಚಂದ್ರಶೇಖರ್ ಎಂಬುವರ ಮೂಲಕ ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು