ಭ್ರಷ್ಟಾಚಾರ (ACB) ನಿಗ್ರಹ ದಳವೇ ಒಂದು ಅತಿದೊಡ್ಡ ಭ್ರಷ್ಟರ ಕೂಪವಾಗಿದೆ, ಅದರ ಮುಖ್ಯಸ್ಥ ಎಡಿಜಿಪಿಯೇ ಕಳಂಕಿತ ಅಧಿಕಾರಿ ಎಂದು ಹೈಕೋರ್ಟ್ ಕಿಡಿ ಕಾರಿದೆ.
”ಎಸಿಬಿ ಕಚೇರಿಗಳೆಲ್ಲಾ ಕಲೆಕ್ಷನ್ ಸೆಂಟರ್ಗಳಾಗಿವೆ ಎಂದಿರುವ ನ್ಯಾಯಪೀಠ ಹಿರಿಯ ಎಎಸ್, ಐಪಿಎಸ್ ಅಧಿಕಾರಿಗಳನ್ನು ಹಿಡಿಯೋದು ಬಿಟ್ಟು ಸಣ್ಣಪುಟ್ಟ ಬಾಲಂಗೋಚಿಗಳನ್ನು ಹಿಡಿಯುತ್ತೀರಿ, ನಿಮಗೆ ನಾಚಿಗೆ ಆಗಲ್ವೇ” ಎಂದು ಪ್ರಶ್ನಿಸಿದ್ದಾರೆ.
ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಉಪ ತಹಶೀಲ್ದಾರ್ ಪಿ.ಎಸ್. ಮಹೇಶ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್, ಎಸಿಬಿ ಕಾರ್ಯವೈಖರಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ರಾಜೀನಾಮೆ ಪ್ರಕಟ
”ಎಸಿಬಿ ಏಕೆ ರಚನೆಯಾಗಿದೆ ನಿಮಗೆ ಗೊತ್ತಾ, ಎಸಿಬಿಯೇ ಭ್ರಷ್ಟಾಚಾರದ ದಂಧೆ ನಡೆಸುತ್ತಿದೆ. ಸರ್ಕಾರ ಉದ್ದೇಶಪೂರ್ವಕವಾಗಿ ಕಳಂಕಿತರನ್ನುಅಲ್ಲಿಗೆ ಕಳುಹಿಸುತ್ತದೆ. ಕಂದಾಯ ಅಧಿಕಾರಿಗಳ ಬಳಿ ಹೋಗಿ ಅಲ್ಲಿ ಏನೇನೆಲ್ಲಾ ಆಗುತ್ತದೆ ಎಂದು ನಿಮಗೆ ತಿಳಿಯುತ್ತದೆ. ಸಮಾಜಕ್ಕೆ ಅಂಟಿರುವ ಭ್ರಷ್ಟಾಚಾರದ ಈ ಕ್ಯಾನ್ಸರ್ನಲ್ಲಿ ಮೇಲ್ಮಟ್ಟದ ಅಧಿಕಾರಿಗಳನ್ನು ಆರೋಪಿಗಳನ್ನಾಗಿ ಮಾಡದೇ ಕೆಳಹಂತದ ಅಧಿಕಾರಿಗಳನ್ನು ಮಾತ್ರ ಆರೋಪಿಗಳನ್ನಾಗಿ ಮಾಡಲಾಗುತ್ತಿದೆ” ಎಂದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು