ಬೆಂಗಳೂರಿನಲ್ಲಿ ಬುಧವಾರ ಏಳು ಕಡೆಗಳಲ್ಲಿ ಎಸಿಬಿ ದಾಳಿಯಲ್ಲಿ ನಡೆಸಿದೆ ಬಿಬಿಎಂಪಿ ರಸ್ತೆ ಸೌಕರ್ಯ ಹಾಗೂ ಮೂಲ ಸೌಕರ್ಯ ವಿಭಾಗ ಎಫ್.ಡಿ.ಎ. ಆಗಿರುವ ಮಾಯಣ್ಣನ ಕತ್ರಿಗುಪ್ಪೆ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಮಾಯಣ್ಣ ಆಪ್ತೆ ಉಮಾದೇವಿ ಅವರ ನಂದಿನಿ ಲೇಔಟ್ ಮನೆ ಮೇಲೂ ರೇಡ್ ಮಾಡಲಾಗಿದೆ.
ಸಕಾಲ ಆಡಳಿತಾಧಿಕಾರಿ ಎಲ್.ಸಿ.ನಾಗರಾಜ್ ನೆಲಮಂಗಲ ನಿವಾಸ ಹಾಗೂ ಯಲಹಂಕ ಸರ್ಕಾರಿ ಆಸ್ಪತ್ರೆ ವೈದ್ಯ ಫಿಜಿಯೋಥೆರಪಿಸ್ಟ್ ರಾಜಶೇಖರ್ ನಿವಾಸ, ಯಶವಂತಪುರ ಬಿಬಿಎಂಪಿ ಡಿ ಗ್ರೂಪ್ ನೌಕರ ಜಿ.ವಿ.ಗಿರಿ, ನಂದಿನಿ ಡೈರಿ ಜನರಲ್ ಮ್ಯಾನೇಜರ್ ಕೃಷ್ಣಾರೆಡ್ಡಿ ಹಾಗೂ ಪ್ರಾಜೆಕ್ಟ್ ಮ್ಯಾನೇಜರ್ ನಿರ್ಮಿತಿ ಕೇಂದ್ರದ ವಾಸುದೇವ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಸಿಬಿ ಡಿವೈಎಸ್ಪಿ ರವಿಶಂಕರ್, ಇನ್ಸ್ಪೆಕ್ಟರ್ ಮಂಜುನಾಥ ನೇತೃತ್ವದಲ್ಲಿ ಮಾಯಣ್ಣ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ, ನಗದು ದೊರೆತಿದೆ. ಇವುಗಳನ್ನು ಮೌಲ್ಯಮಾಪನ ಮಾಡಲು ಮಾಯಣ್ಣ ನಿವಾಸಕ್ಕೆ ಎಸಿಬಿ ಅಧಿಕಾರಿಗಳು ಅಕ್ಕಸಾಲಿಗರನ್ನು ಕರೆತಂದಿದ್ದಾರೆ.
ಮಾಯಣ್ಣ ಕಳೆದ ಏಳು ವರ್ಷಗಳಿಂದ ಬಿಬಿಎಂಪಿ ಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಬಿಬಿಎಂಪಿಯ ರಸ್ತೆ ಅಭಿವೃದ್ಧಿ ಮೂಲ ಸೌಕರ್ಯ ವಿಭಾಗದಲ್ಲಿ ಎಫ್.ಡಿ.ಎ ಆಗಿದ್ದರು.
ರಸ್ತೆ ಅಭಿವೃದ್ದಿಗೆ ಸಂಬಂಧಪಟ್ಟ ಟೆಂಡರ್ ಗಳಲ್ಲಿ ಭಾಗಿ ಆಗಿ ಕಮಿಷನ್ ಪಡೆದಿರುವ ಆರೋಪ ಮಾಯಣ್ಣ ಮೇಲಿದೆ ನಕಲಿ ದಾಖಲೆ ಸೃಷ್ಟಿಸಿ ರಸ್ತೆ ಟೆಂಡರ್ ಪಡೆದಿರೋ ಆರೋಪ ಕೇಳಿ ಬಂದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು