ಬೆಂಗಳೂರಿನಲ್ಲಿ ಬುಧವಾರ ಏಳು ಕಡೆಗಳಲ್ಲಿ ಎಸಿಬಿ ದಾಳಿಯಲ್ಲಿ ನಡೆಸಿದೆ ಬಿಬಿಎಂಪಿ ರಸ್ತೆ ಸೌಕರ್ಯ ಹಾಗೂ ಮೂಲ ಸೌಕರ್ಯ ವಿಭಾಗ ಎಫ್.ಡಿ.ಎ. ಆಗಿರುವ ಮಾಯಣ್ಣನ ಕತ್ರಿಗುಪ್ಪೆ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಮಾಯಣ್ಣ ಆಪ್ತೆ ಉಮಾದೇವಿ ಅವರ ನಂದಿನಿ ಲೇಔಟ್ ಮನೆ ಮೇಲೂ ರೇಡ್ ಮಾಡಲಾಗಿದೆ.
ಸಕಾಲ ಆಡಳಿತಾಧಿಕಾರಿ ಎಲ್.ಸಿ.ನಾಗರಾಜ್ ನೆಲಮಂಗಲ ನಿವಾಸ ಹಾಗೂ ಯಲಹಂಕ ಸರ್ಕಾರಿ ಆಸ್ಪತ್ರೆ ವೈದ್ಯ ಫಿಜಿಯೋಥೆರಪಿಸ್ಟ್ ರಾಜಶೇಖರ್ ನಿವಾಸ, ಯಶವಂತಪುರ ಬಿಬಿಎಂಪಿ ಡಿ ಗ್ರೂಪ್ ನೌಕರ ಜಿ.ವಿ.ಗಿರಿ, ನಂದಿನಿ ಡೈರಿ ಜನರಲ್ ಮ್ಯಾನೇಜರ್ ಕೃಷ್ಣಾರೆಡ್ಡಿ ಹಾಗೂ ಪ್ರಾಜೆಕ್ಟ್ ಮ್ಯಾನೇಜರ್ ನಿರ್ಮಿತಿ ಕೇಂದ್ರದ ವಾಸುದೇವ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಸಿಬಿ ಡಿವೈಎಸ್ಪಿ ರವಿಶಂಕರ್, ಇನ್ಸ್ಪೆಕ್ಟರ್ ಮಂಜುನಾಥ ನೇತೃತ್ವದಲ್ಲಿ ಮಾಯಣ್ಣ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ, ನಗದು ದೊರೆತಿದೆ. ಇವುಗಳನ್ನು ಮೌಲ್ಯಮಾಪನ ಮಾಡಲು ಮಾಯಣ್ಣ ನಿವಾಸಕ್ಕೆ ಎಸಿಬಿ ಅಧಿಕಾರಿಗಳು ಅಕ್ಕಸಾಲಿಗರನ್ನು ಕರೆತಂದಿದ್ದಾರೆ.
ಮಾಯಣ್ಣ ಕಳೆದ ಏಳು ವರ್ಷಗಳಿಂದ ಬಿಬಿಎಂಪಿ ಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಬಿಬಿಎಂಪಿಯ ರಸ್ತೆ ಅಭಿವೃದ್ಧಿ ಮೂಲ ಸೌಕರ್ಯ ವಿಭಾಗದಲ್ಲಿ ಎಫ್.ಡಿ.ಎ ಆಗಿದ್ದರು.
ರಸ್ತೆ ಅಭಿವೃದ್ದಿಗೆ ಸಂಬಂಧಪಟ್ಟ ಟೆಂಡರ್ ಗಳಲ್ಲಿ ಭಾಗಿ ಆಗಿ ಕಮಿಷನ್ ಪಡೆದಿರುವ ಆರೋಪ ಮಾಯಣ್ಣ ಮೇಲಿದೆ ನಕಲಿ ದಾಖಲೆ ಸೃಷ್ಟಿಸಿ ರಸ್ತೆ ಟೆಂಡರ್ ಪಡೆದಿರೋ ಆರೋಪ ಕೇಳಿ ಬಂದಿದೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment