ಲಂಚ ಪಡೆದ ಆರೋಪದಲ್ಲಿ ಬಂಧನಕ್ಕೊಳಗಾಗಿ ಬೆಂಗಳೂರು ನಗರದ ಮಾಜಿ ಜಿಲ್ಲಾಧಿಕಾರಿ ಮಂಜುನಾಥ್ ಅವರ ಪ್ಲ್ಯಾಟ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ದಾಳಿ ವೇಳೆ 30 ಎಕರೆ ಆಸ್ತಿಯ ದಾಖಲೆ ಪತ್ರಗಳು ಪತ್ತೆಯಾಗಿವೆ. ಎಸಿಬಿ ಡಿವೈಎಸ್ ಪಿ ಬಸವರಾಜ್ ಮುಗ್ಧಂ ನೇತೃತ್ವದಲ್ಲಿ ನಡೆದ ಈ ದಾಳಿ ವೇಳೆ ಬೆಂಗಳೂರು-ಬೆಂಗಳೂರು ಗ್ರಾಮಾಂತರ ಭಾಗದಲ್ಲೇ 30 ಎಕರೆ ಜಾಗ ಹೊಂದಿರುವುದು ಪತ್ತೆಯಾಗಿದೆ.ಇದನ್ನು ಓದಿ -ಗುರುವನ್ನೇ ಹತ್ಯೆ ಮಾಡಿದ ಇಬ್ಬರು ಪಾಪಿಗಳನ್ನು ಪೋಲಿಸರು ಬಂಧಿಸಿದ್ದೇ ರೋಚಕ ಕಥೆ
ಸಂಬಂಧಿಕರ ಹೆಸರಿನಲ್ಲೂ ಕೋಟಿ ಕೋಟಿ ಆಸ್ತಿ ಮಾಡಿರುವುದು ಪತ್ತೆಯಾಗಿದೆ. ಎಸಿಬಿ ಅಧಿಕಾರಿಗಳು ಮಂಜುನಾಥ್ ಅವರ ಬ್ಯಾಂಕ್ ಖಾತೆಗಳ ವಿವರಗಳನ್ನೂ ಪಡೆಯುತ್ತಿದ್ದಾರೆ.
ಮಂಜುನಾಥ್ ಅವರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ವ್ಯಯಿಸಿರುವ ಹಣದ ವಿವರ ಪಡೆಯುತ್ತಿದ್ಧಾರೆ. ಇತರೆ ಆಸ್ತಿಪತ್ರದ ದಾಖಲೆಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ. 12 ಬ್ಯಾಂಕ್ ಖಾತೆಗಳ ವಿವರಗಳನ್ನು ಕೂಡ ಪಡೆಯಲಾಗಿದೆ.
ಮಂಜುನಾಥ್ ಎಷ್ಟು ಬಾರಿ ವಿದೇಶಿ ಪ್ರವಾಸಕ್ಕೆ ತೆರಳಿದ್ದಾರೆ ಎಂಬ ಮಾಹಿತಿಯನ್ನು ಕೂಡ ಕಲೆಹಾಕಲಾಗಿದೆ. ಬೇನಾಮಿ ಪ್ರಾಪರ್ಟಿಗಳ ಬಗೆಗೂ ಎಸಿಬಿ ಮಾಹಿತಿ ಕಲೆಹಾಕಿದೆ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ