ಲಂಚ ಪಡೆದ ಆರೋಪದಲ್ಲಿ ಬಂಧನಕ್ಕೊಳಗಾಗಿ ಬೆಂಗಳೂರು ನಗರದ ಮಾಜಿ ಜಿಲ್ಲಾಧಿಕಾರಿ ಮಂಜುನಾಥ್ ಅವರ ಪ್ಲ್ಯಾಟ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ದಾಳಿ ವೇಳೆ 30 ಎಕರೆ ಆಸ್ತಿಯ ದಾಖಲೆ ಪತ್ರಗಳು ಪತ್ತೆಯಾಗಿವೆ. ಎಸಿಬಿ ಡಿವೈಎಸ್ ಪಿ ಬಸವರಾಜ್ ಮುಗ್ಧಂ ನೇತೃತ್ವದಲ್ಲಿ ನಡೆದ ಈ ದಾಳಿ ವೇಳೆ ಬೆಂಗಳೂರು-ಬೆಂಗಳೂರು ಗ್ರಾಮಾಂತರ ಭಾಗದಲ್ಲೇ 30 ಎಕರೆ ಜಾಗ ಹೊಂದಿರುವುದು ಪತ್ತೆಯಾಗಿದೆ.ಇದನ್ನು ಓದಿ -ಗುರುವನ್ನೇ ಹತ್ಯೆ ಮಾಡಿದ ಇಬ್ಬರು ಪಾಪಿಗಳನ್ನು ಪೋಲಿಸರು ಬಂಧಿಸಿದ್ದೇ ರೋಚಕ ಕಥೆ
ಸಂಬಂಧಿಕರ ಹೆಸರಿನಲ್ಲೂ ಕೋಟಿ ಕೋಟಿ ಆಸ್ತಿ ಮಾಡಿರುವುದು ಪತ್ತೆಯಾಗಿದೆ. ಎಸಿಬಿ ಅಧಿಕಾರಿಗಳು ಮಂಜುನಾಥ್ ಅವರ ಬ್ಯಾಂಕ್ ಖಾತೆಗಳ ವಿವರಗಳನ್ನೂ ಪಡೆಯುತ್ತಿದ್ದಾರೆ.
ಮಂಜುನಾಥ್ ಅವರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ವ್ಯಯಿಸಿರುವ ಹಣದ ವಿವರ ಪಡೆಯುತ್ತಿದ್ಧಾರೆ. ಇತರೆ ಆಸ್ತಿಪತ್ರದ ದಾಖಲೆಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ. 12 ಬ್ಯಾಂಕ್ ಖಾತೆಗಳ ವಿವರಗಳನ್ನು ಕೂಡ ಪಡೆಯಲಾಗಿದೆ.
ಮಂಜುನಾಥ್ ಎಷ್ಟು ಬಾರಿ ವಿದೇಶಿ ಪ್ರವಾಸಕ್ಕೆ ತೆರಳಿದ್ದಾರೆ ಎಂಬ ಮಾಹಿತಿಯನ್ನು ಕೂಡ ಕಲೆಹಾಕಲಾಗಿದೆ. ಬೇನಾಮಿ ಪ್ರಾಪರ್ಟಿಗಳ ಬಗೆಗೂ ಎಸಿಬಿ ಮಾಹಿತಿ ಕಲೆಹಾಕಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ