ಈ ಬಾರಿ ಎಸಿಬಿ ಅಧಿಕಾರಿಗಳು ಸಕಾ೯ರಿ ಅಧಿಕಾರಿಗಳ ನಿವಾಸದ ಮೇಲೆ ದಾಳಿ ಮಾಡದೇ BDA ಅಧಿಕಾರಿಗಳ ಮಧ್ಯವತಿ೯ಗಳ ನಿವಾಸದ ಮೇಲೆ ಮಂಗಳವಾರ ಬೆಂಗಳೂರಿನ 9 ಕಡೆ ಏಕ ಕಾಲದಲ್ಲಿ ದಾಳಿ ನಡೆಸಿದ್ದಾರೆ.
ಎಸ್.ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ 100 ಮಂದಿ ಅಧಿಕಾರಿಗಳಿಂದ ಏಕ ಕಾಲದಲ್ಲಿ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಬಿಡಿಎ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದ ಮಧ್ಯವರ್ತಿಗಳ ನಿವಾಸದ ಮೇಲೆ ಈ ದಾಳಿ ನಡೆದಿದೆ
ಬಿಡಿಎ ಕಚೇರಿಯಲ್ಲಿ ಇರಬೇಕಾದ ಫೈಲುಗಳನ್ನೇ ಹೊರಗೆ ತಂದು ಬ್ರೋಕರ್ ಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಮಧ್ಯವರ್ತಿಗಳ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ.
ಈ ಹಿಂದೆ ದಾಳಿ ನಡೆಸಿದಾಗ ಎಸಿಬಿ ಅಧಿಕಾರಿಗಳಿಗೆ ಈ ಕುರಿತು ಮಾಹಿತಿ ಲಭ್ಯವಾಗಿತ್ತು. ಅನೇಕ ಬ್ರೋಕರ್ ಗಳ ಮನೆಯಲ್ಲಿ ಬಿಡಿಎ ಸಂಬಂಧಿತ ಫೈಲುಗಳು ಇರುವ ಸಾಧ್ಯತೆ ಹಿನ್ನಲೆ, ಏಕಾ ಕಾಲಕ್ಕೆ 9 ಮಂದಿ ಮಧ್ಯವರ್ತಿಗಳ ಮನೆಯ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ ಎಂಬ ಎನ್ನಲಾಗಿದೆ.
ನಗರದ ಚಾಮರಾಜಪೇಟೆ, ದೊಮ್ಮಲೂರು, ಆರ್ಟಿ ನಗರ, ಮಲ್ಲತ್ತಹಳ್ಳಿಗಳಲ್ಲಿ ಈ ದಾಳಿಗಳನ್ನು ಮಾಡಲಾಗಿದೆ. ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದ್ದಾರೆ.
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್