January 28, 2026

Newsnap Kannada

The World at your finger tips!

kolar, lokayukta , SDA

ಮಳವಳ್ಳಿಯಲ್ಲಿ ಲಂಚ ಸ್ವೀಕಾರ

Spread the love
  • ಗ್ರಾ.ಪಂ. ಅಧ್ಯಕ್ಷೆಯ ಪತಿ, ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆ

ಮಳವಳ್ಳಿ:ನಿವೇಶನ ವಿವಾದದ ಸಂಬಂಧ ವ್ಯಕ್ತಿಯೊಬ್ಬರಿಂದ ಒಂದು ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ ಮಳವಳ್ಳಿ ತಾಲ್ಲೂಕಿನ ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯ ಪತಿ ಹಾಗೂ ಉಪಾಧ್ಯಕ್ಷರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಲಂಚ ಸ್ವೀಕರಿಸುವಾಗ ಶೆಟ್ಟಹಳ್ಳಿ ಗ್ರಾ.ಪಂ. ಅಧ್ಯಕ್ಷೆಯ ಪತಿ ಶಂಕರ್ ಮತ್ತು ಉಪಾಧ್ಯಕ್ಷ ಮನೋಹರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಶೆಟ್ಟಹಳ್ಳಿ ಗ್ರಾಮದ ಶಾಲಾ ಜಾಗವನ್ನು ಒತ್ತುವರಿ ಮಾಡಿಕೊಂಡು ಕಾಂಪೌಂಡ್ ನಿರ್ಮಿಸಿರುವ ಬಗ್ಗೆ ವಿವಾದ ಬಗೆಹರಿಸಲು ಇವರಿಬ್ಬರೂನ 10 ಲಕ್ಷ ರೂ. ಲಂಚ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿ ಬಂದಿದೆ.

ಈ ಸಂಬಂಧ ಎಂ.ಪಿ. ಶಂಕರ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.ಇದನ್ನು ಓದಿ –ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ – ಇಬ್ಬರು ಕಾರ್ಮಿಕರ ದುರ್ಮರಣ

ಇಂದು ಮಧ್ಯಾಹ್ನ 3.30ಕ್ಕೆ ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ನೇತೃತ್ವದ ಡಿವೈಎಸ್ಪಿ ಸುನೀಲ್ ಕುಮಾರ್, ಇನ್‌ಸ್ಪೆಕ್ಟರ್ ಬ್ಯಾಟರೇಗೌಡ ಮತ್ತು ಅವರ ತಂಡ ಮಾರೇಹಳ್ಳಿ ದೇವಸ್ಥಾನದ ಬಳಿ ಕಾರ್ಯಾಚರಣೆ ನಡೆಸಿ, ಒಂದು ಲಕ್ಷ ಮುಂಗಡ ಹಣ ಪಡೆಯುತ್ತಿದ್ದ ವೇಳೆ ಶಂಕರ್ ಮತ್ತು ಮನೋಹರ್ ಅವರನ್ನು ಬಂಧಿಸಿದ್ದಾರೆ.

error: Content is protected !!