ಮಂಡ್ಯ : ಗ್ರಾಮ ಲೆಕ್ಕಾಧಿಕಾರಿಯೊಬ್ಬರಿಂದ ಪಾಂಡವಪುರ ತಹಶೀಲ್ದಾರ್ ಸೌಮ್ಯ 40 ಸಾವಿರ ರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ ಜರುಗಿದೆ.
ಗ್ರಾಮ ಲೆಕ್ಕಾಧಿಕಾರಿ ಮರಿಸ್ವಾಮಿ ಎಂಬುವವರಿಂದ 40 ಸಾವಿರ ಲಂಚದ ಹಣ ಸ್ವೀಕಾರ ಮಾಡುವಾಗ ತಹಶೀಲ್ದಾರ್ ರನ್ನು ಬಲೆಗೆ ಬೀಳಿಸಲಾಗಿದೆ.
ಗ್ರಾಮ ಲೆಕ್ಕಾಧಿಕಾರಿ ಮರಿಸ್ವಾಮಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅಶಿಸ್ತು ತೋರಿದ ಹಿನ್ನೆಲೆಯಲ್ಲಿ ಅವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗಿತ್ತು ನಂತರ ಬೇರೆ ವೃತ್ತಕ್ಕೆ ವರ್ಗಾವಣೆ ಮಾಡಲಾಗಿತ್ತು.
ಗ್ರಾಮ ಲೆಕ್ಕಾಧಿಕಾರಿ ಮರಿಸ್ವಾಮಿ ಅವರು ತಮ್ಮ ವಿರುದ್ದ ನಡಯುತ್ತಿದ್ದ 124 ಕಲಂ ತನಿಖೆ ಮತ್ತು ಈ ಮೊದಲು ಕರ್ತವ್ಯ ನಿರ್ವಹಿಸುತ್ತಿದ್ದ ಅದೇ ವೃತ್ತಕ್ಕೆ ವರ್ಗಾವಣೆ ಮಾಡಲು 40 ಸಾವಿರ ರೂಪಾಯಿ ಲಂಚ ನೀಡುವಂತೆ ಒತ್ತಡ ಹೇರಿದ್ದಾರೆ.
ಆಗ ಗ್ರಾಮ ಲೆಕ್ಕಾಧಿಕಾರಿ ಮರಿಸ್ವಾಮಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ತಹಶೀಲ್ದಾರ್ ಸೌಮ್ಯ ವಿರುದ್ದ ದೂರು ದಾಖಲಿಸಿದ್ದರು.‘ಹೆಚ್-1ಬಿ ವೀಸಾ’ ನಿಯಮ ಸಡಿಲಿಸಿದ ಅಮೆರಿಕ-ಭಾರತಿಯರಿಗೆ ವರದಾನ
ಗುರುವಾರ ಲೋಕಾಯುಕ್ತ ಪೊಲೀಸರು ನೀಡಿದ ಸೂಚನೆಯಂತೆ ತಹಶೀಲ್ದಾರ್ ಸೌಮ್ಯ ಅವರಿಗೆ ರಾಜಸ್ವ ನಿರೀಕ್ಷಕ ಮಾದೇಶ್ ಮೂಲಕ 40 ಸಾವಿರ ರೂಪಾಯಿ ಲಂಚವನ್ನು ನೀಡುವಾಗ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ದಾಳಿ ಮಾಡಿ ತಹಶೀಲ್ದಾರ್ ಸೌಮ್ಯ ಮತ್ತು ರಾಜಸ್ವ ನಿರೀಕ್ಷಕ ಮಾದೇಶ್ ಅವರನ್ನು ಲಂಚದ ಹಣದ ಸಮೇತ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಂಧನವೂ ಆಗಿದೆ ತನಿಖೆ ನಡೆಯುತ್ತಿದೆ.
- ಇಂಡಿಯನ್ ಆಯಿಲ್ ಲಿಮಿಟೆಡ್ನಲ್ಲಿ 456 ಅಪ್ರೆಂಟಿಸ್ ಹುದ್ದೆಗಳ ಭರ್ತಿ – ಅರ್ಜಿ ಆಹ್ವಾನ
- ಇಂದಿನಿಂದಲೇ ಬಿಯರ್ ದರ ಹೆಚ್ಚಳ – ಹೊಸ ಬೆಲೆ ವಿವರ !
- ಮೈಸೂರಿನಲ್ಲಿ ಹೊಸ ಹೋಟೆಲ್ ಆರಂಭಿಸಲು ತಾಜ್ ಗ್ರೂಪ್ ಸಿದ್ಧ
- ಬೆಂಗಳೂರು ಹೊರತಾಗಿ ಇತರ ಭಾಗಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ: ಡಿ.ಕೆ. ಶಿವಕುಮಾರ್
- ಮೈಸೂರು: ಅವಹೇಳನಕಾರಿ ಪೋಸ್ಟ್ ಹಿನ್ನಲೆಯಲ್ಲಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ – 14 ಪೊಲೀಸರಿಗೆ ಗಾಯ
- ಭಾರತೀಯ ಗ್ರಂಥಾಲಯ ಪಿತಾಮಹ -ಪದ್ಮಶ್ರೀ ಡಾ. ಎಸ್. ಆರ್. ರಂಗನಾಥನ್
More Stories
ಇಂಡಿಯನ್ ಆಯಿಲ್ ಲಿಮಿಟೆಡ್ನಲ್ಲಿ 456 ಅಪ್ರೆಂಟಿಸ್ ಹುದ್ದೆಗಳ ಭರ್ತಿ – ಅರ್ಜಿ ಆಹ್ವಾನ
ಇಂದಿನಿಂದಲೇ ಬಿಯರ್ ದರ ಹೆಚ್ಚಳ – ಹೊಸ ಬೆಲೆ ವಿವರ !
ಮೈಸೂರಿನಲ್ಲಿ ಹೊಸ ಹೋಟೆಲ್ ಆರಂಭಿಸಲು ತಾಜ್ ಗ್ರೂಪ್ ಸಿದ್ಧ