Main News

ಗೃಹ ಮಂತ್ರಿ ಆರಗ ಸೇರಿ ಇತರ VVIPಗೆ ನಿವೇಶನ: BDA ಆಯುಕ್ತರ ಎತ್ತಂಗಡಿಗೆ ಸುಪ್ರೀಂ ಕೋರ್ಟ್ ಆದೇಶ

ರಾಜ್ಯ ಗೃಹ ಮಂತ್ರಿ ಆರಗ ಜ್ಞಾನೇಂದ್ರ ಸೇರಿ ಇತರೆ ವಿವಿಐಪಿಗಳಿಗೆ ನಿವೇಶನ ಹಂಚಿಕೆ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಆಯುಕ್ತ ಎಂ.ಬಿ ರಾಜೇಶ್ ಗೌಡ ಅವರನ್ನು ಎತ್ತಂಗಡಿ ಮಾಡುವಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ಬಹು ಜನರಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿದಕ್ಕೆ ಕೋರ್ಟ್‌ ರಾಜೇಶ ಗೌಡ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಇದನ್ನು ಓದಿ ಕುಮಾರಣ್ಣನ ಜೊತೆ ನನ್ನನ್ನು ಜನ ಒಂದುಗೂಡಿಸಿದ್ದಾರೆ: ಜಿಟಿಡಿ ಜೆಡಿಎಸ್‌ನಲ್ಲೇ ಉಳಿಯುತ್ತಾರಾ ?

ಡಾ.ಶಿವರಾಮ ಕಾರಂತ ಬಡಾವಣೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಎಸ್‌.ಅಬ್ದುಲ್‌ ನಜೀರ್ ಹಾಗೂ ಸಂಜೀವ್‌ ಖನ್ನಾ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠ ಅಧಿಕಾರಿಗಳಿಗೆ ಚಾಟಿ ಬೀಸಿತು.

2021ರ ಅ . 29ರಂದು ಸುಪ್ರೀಂ ಕೋರ್ಟ್‌ ಹೊರಡಿಸಿದ ಆದೇಶಕ್ಕೆ ವ್ಯತಿರಿಕ್ತವಾಗಿ ತೀರ್ಮಾನ ತೆಗೆದುಕೊಂಡಿದ್ದಕ್ಕೆ ಬಿಡಿಎ ವಿರುದ್ಧ ಕೆಂಡಾಮಂಡಲವಾಗಿದೆ.

ಕೋರ್ಟ್‌ ಆದೇಶ ಉಲ್ಲಂಘಿಸಿದ ಬಳಿಕ ಆಯುಕ್ತರು ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ ಎಂದರೆ ಅರ್ಥವೇನು? ಜಿ ಕೆಟಗರಿ ನಿವೇಶನವನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ. ಆಯುಕ್ತರಿಗೆ ಕೋರ್ಟ್‌ ಆದೇಶಗಳ ಬಗ್ಗೆ ಗೌರವವೇ ಇಲ್ಲ. ಆದೇಶಕ್ಕೆ ಅವಿಧೇಯತೆ ತೋರಿದ ರಾಜೇಶ ಗೌಡ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು.

ಇಂದಿನಿಂದ ಅವರು ಯಾವುದೇ ಪ್ರಮುಖ ಆದೇಶಗಳಿಗೆ ಸಹಿ ಹಾಕುವಂತಿಲ್ಲ. ಇದು ಕೋರ್ಟ್‌ ಆದೇಶ. ಬಿಡಿಎ ಕಾರ್ಯದರ್ಶಿ ಹಾಗೂ ಉಪ ಕಾರ್ಯದರ್ಶಿಯವರು ಅಕ್ರಮ ಹಂಚಿಕೆಯಲ್ಲಿ ಭಾಗಿಯಾಗಿದ್ದು ಅವರನ್ನು ವರ್ಗಾವಣೆ ಮಾಡುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ.

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024