ಬೆಂಗಳೂರಿನಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯಿಂದ ಪೊಲೀಸರು ಡೈಯಿಂಗ್ ಡಿಕ್ಲರೇಶನ್ (ಸಾವಿಗೆ ಮುನ್ನ ತಿಳಿಸುವ ಕಾರಣ) ಪಡೆದಿದ್ದಾರೆ.
ವ್ಯಕ್ತಿ ಸಾಯುವ ಮುನ್ನ ತನ್ನ ಸಾವಿಗೆ ಕಾರಣವನ್ನು ತಿಳಿಸುವುದನ್ನು ಡೈಯಿಂಗ್ ಡಿಕ್ಲರೇಶನ್ ಸ್ಟೇಟ್ಮೆಂಟ್ ಎಂದು ಕರೆಯಲಾಗುತ್ತದೆ.
ಇದು ಬಲವಾದ ಸಾಕ್ಷ್ಯವಾಗಿ ಆರೋಪಿಗೆ ಶಿಕ್ಷೆ ನೀಡಲು ಸಹಕಾರಿಯಾಗುತ್ತದೆ.
ಪೊಲೀಸರು ಯುವತಿಯಿಂದ ಪಡೆದ ಸ್ಟೇಟ್ಮೆಂಟ್ಗೆ ಎಕ್ಸಿಕ್ಯುಟಿವ್ ಮ್ಯಾಜಿಸ್ಟ್ರೇಟ್ನಿಂದ ಸಹಿ ಪಡೆದುಕೊಂಡಿದ್ದಾರೆ. ಸೆಂಟ್ಜಾನ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಯುವತಿ ಹೋರಾಟ ಮಾಡುತ್ತಿದ್ದಾಳೆ.
ಶುಕ್ರವಾರ ಮಧ್ಯಾಹ್ನ ಆಸ್ಪತ್ರೆಗೆ ತೆರಳಿದ ಪೊಲೀಸರು ಹಾಗೂ ಎಕ್ಸಿಕ್ಯುಟಿವ್ ಮ್ಯಾಜಿಸ್ಟ್ರೇಟ್(ತಹಶೀಲ್ದಾರ್) ಸಮ್ಮುಖದಲ್ಲಿ ಯುವತಿಯಿಂದ ಹೇಳಿಕೆ ಪಡೆದುಕೊಂಡಿದ್ದಾರೆ.
ಆ್ಯಸಿಡ್ ದಾಳಿಕೋರ ಯಾರು? ಎಷ್ಟೊತ್ತಿಗೆ ಘಟನೆ ನಡೆಯಿತು? ದಾಳಿ ಮಾಡಿದ್ದು ಹೇಗೆ? ಆ್ಯಸಿಡ್ ಯಾವುದರಲ್ಲಿ ತಂದಿದ್ದ? ಆ್ಯಸಿಡ್ ದಾಳಿಗೊಳಗಾದ ಬಳಿಕ ಏನಾಯಿತು? ದೇಹದ ಯಾವ ಭಾಗಗಳು ಆ್ಯಸಿಡ್ನಿಂದ ಗಾಯಗಳಾಗಿವೆ? ಹೀಗೆ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಯುವತಿ ಉತ್ತರ ನೀಡಿದ್ದಾಳೆ ಎನ್ನಲಾಗಿದೆ.
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
- ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
- ಪದವೀಧರರ ಕ್ಷೇತ್ರದ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ನಾಮಪತ್ರ ಸಲ್ಲಿಕೆ
More Stories
ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
ಮಂಡ್ಯದ 5 ರು ವೈದ್ಯ ಡಾ. ಶಂಕರೇಗೌಡರು ಬೆಂಗಳೂರಿನ ಪೋರ್ಟಿಸ್ ಗೆ ಶಿಪ್ಟ್
ಅಮೆರಿಕಾ ಟೆಕ್ಸಾಸ್ ನಲ್ಲಿ ದುರಂತ : ಶಸ್ತ್ರಧಾರಿ ಯುವಕನಿಂದ ಗುಂಡಿನ ದಾಳಿ: 18 ಶಾಲಾ ಮಕ್ಕಳು ಸೇರಿ 21 ಮಂದಿ ಸಾವು