ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ದಾಳಿ ನಡೆದಿದೆ, ವಿವಾಹಿತ ಮಹಿಳೆ ಮೇಲೆ ಆ್ಯಸಿಡ್ ಎರಚಿ ಎಸ್ಕೇಪ್ ಆಗಿದ್ದಾನೆ ಈ ಘಟನೆ ಸಾರಕ್ಕಿ ಸಿಗ್ನಲ್ ಬಳಿ ನಡೆದಿದೆ.
ಇದನ್ನು ಓದಿ –ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡರಿಂದ ಅಡ್ಡ ಮತದಾನ – ಕಾಂಗ್ರೆಸ್ ಲಾಭ
ಈಗಾಗಲೇ ಮದುವೆಯಾಗಿದ್ದ ಮಹಿಳೆ ಹಿಂದೆ ಬಿದ್ದಿದ್ದ ಗೋರಿಪಾಳ್ಯದ ನಿವಾಸಿ ಅಹ್ಮದ್ ಎಂಬಾತನೇ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ.
ಮಹಿಳೆ ಹಾಗೂ ಆರೋಪಿ ನಡುವೆ ಮದುವೆ ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ ನಡೆದು ಸಾರಕ್ಕಿ ಸಿಗ್ನಲ್ ಬಳಿ ಆ್ಯಸಿಡ್ ಹಾಕಿ ಆರೋಪಿ ಪರಾರಿಯಾಗಿದ್ದಾನೆ.
ಸಂತ್ರಸ್ಥೆಗೆ ಮದುವೆಯಾಗಿ ಮಕ್ಕಳು ಇದ್ದಾರೆ. ಆದರೂ ಪರಸ್ಪರ ಇಬ್ಬರೂ ಪರಸ್ಪರ ಇಷ್ಟ ಪಟ್ಟಿದ್ದರು ಎನ್ನಲಾಗಿದೆ. ಆದರೆ ಮರು ಮದುವೆಯಾಗಲು ಮಹಿಳೆ ಕೆಲ ಸಮಯವಕಾಶ ಕೇಳಿದ್ದರಂತೆ. ಇದಕ್ಕೆ ಒಪ್ಪದ ಆರೋಪಿ ಅಹ್ಮದ್ ತಕ್ಷಣ ಮದುವೆ ಅಗುವಂತೆ ಒತ್ತಾಯ ಮಾಡಿ ಪದೇ ಪದೇ ಗಲಾಟೆ ಮಾಡ್ತಿದ್ದನಂತೆ.
ಶುಕ್ರವಾರ ಬೆಳಗ್ಗೆ ಕೆ.ಎಸ್ ಲೇಔಟ್ ನಿಂದ ಜೆ.ಪಿ ನಗರದ ಕಡೆ ಹೋಗುತ್ತಿದ್ದ ಮಹಿಳೆಯನ್ನು ತಡೆದಿದ್ದ ಮುಖಕ್ಕೆ ಆ್ಯಸಿಡ್ ಹಾಕಿ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಮಹಿಳೆಯ ಮುಖಕ್ಕೆ ಗಾಯವಾಗಿದ್ದು, ಬಲಗಣ್ಣಿಗೆ ಗಂಭೀರಗಾಯವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸದ್ಯ ಆಕೆಯನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಕುರಿತಂತೆ ದೂರು ದಾಖಲಿಸಿಕೊಂಡಿರುವ ಕುಮಾರಸ್ವಾಮಿ ಲೇಔಟ್ ಪೊಲೀಸರು ಆರೋಪಿ ಬಂಧನಕ್ಕಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು