ಮನೆಯ ಜಗಲಿಯ ಮೇಲೆ ಮಲಗಿದ್ದ ರಂಗಭೂಮಿ ಕಲಾವಿದೆ ಮೇಲೆ ಕಿಡಿಗೇಡಿಗಳು ಆ್ಯಸಿಡ್ ದಾಳಿ ನಡೆಸಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್ನ ಗಣೇಶ್ ಬ್ಲಾಕ್ನಲ್ಲಿ ಜರುಗಿದೆ.
ಆ್ಯಸಿಡ್ ದಾಳಿಯಿಂದ ಗಾಯಗೊಂಡ ದೇವಿ ರಂಗಭೂಮಿ ಕಲಾವಿದೆಯಾಗಿದ್ದರು.
ಈ ಹಿಂದೆ ಬಿಎಂಟಿಸಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಅನಾರೋಗ್ಯದಿಂದ ಬಿಎಂಟಿಸಿ ನಿರ್ವಾಹಕ ಹುದ್ದೆ ತೊರೆದಿದ್ದರು. ಮಾರ್ಚ್ 18 ರಂದು ಮನೆಯ ಜಗಲಿ ಮೇಲೆ ಮಲಗಿದ್ದ ದೇವಿ ಮೇಲೆ ರಂಗಭೂಮಿ ಸಹಪಾಠಿಗಳೇ ಈ ದುಷ್ಕ್ರತ್ಯವನ್ನು ಎಸಗಿದ್ದಾರೆ.
ಆರೋಪಿಗಳನ್ನು ರಮೇಶ್, ಸ್ವಾತಿ, ಯೋಗೇಶ್ ಎಂದು ಗುರುತಿಸಲಾಗಿದೆ ಸ್ವಾತಿ ರಮೇಶ್ಗೆ ಆ್ಯಸಿಡ್ ತಂದು ಕೃತ್ಯ ನಡೆಸುವಂತೆ ಪ್ರಚೋದನೆ ನೀಡಿದ್ದಾರೆ. ಇದೀಗ ಈ ಸಂಬಂಧ ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ