February 21, 2026

Newsnap Kannada

The World at your finger tips!

rangbumi

ರಂಗಭೂಮಿ ಕಲಾವಿದೆ ಮೇಲೆ ಆ್ಯಸಿಡ್ ದಾಳಿ : ಮಹಿಳೆ ಸೇರಿ ಮೂವರ ಬಂಧನ

Spread the love

ಮನೆಯ ಜಗಲಿಯ ಮೇಲೆ ಮಲಗಿದ್ದ ರಂಗಭೂಮಿ ಕಲಾವಿದೆ ಮೇಲೆ ಕಿಡಿಗೇಡಿಗಳು ಆ್ಯಸಿಡ್ ದಾಳಿ ನಡೆಸಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್‍ನ ಗಣೇಶ್ ಬ್ಲಾಕ್‍ನಲ್ಲಿ ಜರುಗಿದೆ.

ಆ್ಯಸಿಡ್ ದಾಳಿಯಿಂದ ಗಾಯಗೊಂಡ ದೇವಿ ರಂಗಭೂಮಿ ಕಲಾವಿದೆಯಾಗಿದ್ದರು.

ಈ ಹಿಂದೆ ಬಿಎಂಟಿಸಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಅನಾರೋಗ್ಯದಿಂದ ಬಿಎಂಟಿಸಿ ನಿರ್ವಾಹಕ ಹುದ್ದೆ ತೊರೆದಿದ್ದರು. ಮಾರ್ಚ್ 18 ರಂದು ಮನೆಯ ಜಗಲಿ ಮೇಲೆ ಮಲಗಿದ್ದ ದೇವಿ ಮೇಲೆ ರಂಗಭೂಮಿ ಸಹಪಾಠಿಗಳೇ ಈ ದುಷ್ಕ್ರತ್ಯವನ್ನು ಎಸಗಿದ್ದಾರೆ.

ಆರೋಪಿಗಳನ್ನು ರಮೇಶ್, ಸ್ವಾತಿ, ಯೋಗೇಶ್ ಎಂದು ಗುರುತಿಸಲಾಗಿದೆ ಸ್ವಾತಿ ರಮೇಶ್‍ಗೆ ಆ್ಯಸಿಡ್ ತಂದು ಕೃತ್ಯ ನಡೆಸುವಂತೆ ಪ್ರಚೋದನೆ ನೀಡಿದ್ದಾರೆ. ಇದೀಗ ಈ ಸಂಬಂಧ ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

error: Content is protected !!