ಮನೆಯ ಜಗಲಿಯ ಮೇಲೆ ಮಲಗಿದ್ದ ರಂಗಭೂಮಿ ಕಲಾವಿದೆ ಮೇಲೆ ಕಿಡಿಗೇಡಿಗಳು ಆ್ಯಸಿಡ್ ದಾಳಿ ನಡೆಸಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್ನ ಗಣೇಶ್ ಬ್ಲಾಕ್ನಲ್ಲಿ ಜರುಗಿದೆ.
ಆ್ಯಸಿಡ್ ದಾಳಿಯಿಂದ ಗಾಯಗೊಂಡ ದೇವಿ ರಂಗಭೂಮಿ ಕಲಾವಿದೆಯಾಗಿದ್ದರು.
ಈ ಹಿಂದೆ ಬಿಎಂಟಿಸಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಅನಾರೋಗ್ಯದಿಂದ ಬಿಎಂಟಿಸಿ ನಿರ್ವಾಹಕ ಹುದ್ದೆ ತೊರೆದಿದ್ದರು. ಮಾರ್ಚ್ 18 ರಂದು ಮನೆಯ ಜಗಲಿ ಮೇಲೆ ಮಲಗಿದ್ದ ದೇವಿ ಮೇಲೆ ರಂಗಭೂಮಿ ಸಹಪಾಠಿಗಳೇ ಈ ದುಷ್ಕ್ರತ್ಯವನ್ನು ಎಸಗಿದ್ದಾರೆ.
ಆರೋಪಿಗಳನ್ನು ರಮೇಶ್, ಸ್ವಾತಿ, ಯೋಗೇಶ್ ಎಂದು ಗುರುತಿಸಲಾಗಿದೆ ಸ್ವಾತಿ ರಮೇಶ್ಗೆ ಆ್ಯಸಿಡ್ ತಂದು ಕೃತ್ಯ ನಡೆಸುವಂತೆ ಪ್ರಚೋದನೆ ನೀಡಿದ್ದಾರೆ. ಇದೀಗ ಈ ಸಂಬಂಧ ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!