ಮತಾಂತರ ನಿಷೇಧ ಕಾಯ್ದೆ ನಂತರ ಲವ್ ಜಿಹಾದ್ ವಿರುದ್ಧವೂ ಕಾಯ್ದೆಯನ್ನು ತರುತ್ತೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಸುದ್ದಿಗಾರರಜೊತೆ ಮಾತನಾಡಿದ ಸಚಿವ ಅವರು, ಬಿಜೆಪಿ ಮೊದಲಿನಿಂದಲೂ ಗೋಹತ್ಯೆ ನಿಷೇಧ ಕಾಯ್ದೆ ತರುವುದಾಗಿ ಹೇಳಿತ್ತು. ಅದರಂತೆ ಅದನ್ನು ಜಾರಿಗೆ ತಂದೆವು. ಈಗ ಮತಾಂತರ ನಿಷೇಧ ಕಾಯ್ದೆಯನ್ನು ಈ ಅಧಿವೇಶನದಲ್ಲಿ ಜಾರಿಗೆ ತರುತ್ತೇವೆ ಎಂದರು.
ಯಾವ ಯಾವ ಕಾರಣಕ್ಕೆ ಮತಾಂತರ ಆಗುತ್ತಿದೆ. ಅದರ ದುಷ್ಪರಿಣಾಮ ಏನು ಎಂಬುದು ಗೊತ್ತಿದೆ. ಕೇವಲ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಕಾಯ್ದೆ ತರುತ್ತಿಲ್ಲ. ಈ ಬಗ್ಗೆ ಚರ್ಚೆಗೆ ಬರಲಿ, ಉತ್ತರ ನೀಡಲು ನಾವು ಸಿದ್ಧವಿದ್ದೇವೆ ಎಂದು ಹೇಳಿದರು.