ನೀಟ್ ಪರೀಕ್ಷೆಯ ಮೂಲಕ ವೈದ್ಯಕೀಯ ಶಿಕ್ಷಣದ ಸೀಟುಗಳ ಹಂಚಿಕೆ ಮುಗಿದ ನಂತರವೇ ಎಂಜಿನಿಯರಿಂಗ್ ಸೀಟುಗಳ ಹಂಚಿಕೆಗೆ ಕೌನ್ಸೆಲಿಂಗ್ ನಡೆಸಲು ತೀರ್ಮಾನಿಸಲಾಗಿದೆ. ಸೀಟು ಬ್ಲಾಕಿಂಗ್ ತಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಹೇಳಿದರು.
ಸಚಿವರು ಬೆಂಗಳೂರಿನಲ್ಲಿ ಬುಧವಾರ ವರದಿಗಾರರೊಂದಿಗೆ ಮಾತನಾಡಿದರು. ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಅಡಳಿತ ಮಂಡಳಿಗಳು ಶೇ. ೩೦ರಷ್ಟು ಶುಲ್ಕ ಹೆಚ್ಚಳದ ಬೇಡಿಕೆ ಇಟ್ಟಿದ್ದವು. ಆದರೆ ಇದಕ್ಕೆ ರಾಜ್ಯ ಸರ್ಕಾರ ಸಮ್ಮಿತಿಸಿಲ್ಲ. ಪ್ರವೇಶ ಶುಲ್ಕದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಲೇಜು ಆಡಳಿತ ಮಂಡಳಿಗಳು ಇತರ ಶುಲ್ಕದ ಹೆಸರಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚಿನ ಹಣ ಪಡೆಯುವಂತಿಲ್ಲ. ಇತರೆ ಶುಲ್ಕ ೨೦,೦೦೦ ಸಾವಿರರೂ. ಮೀರುವಂತಿಲ್ಲ. ಇತರ ಶುಲ್ಕದ ವಿವರಗಳನ್ನು ಎಲ್ಲ ಕಾಲೇಜುಗಳು ಕಡ್ಡಾಯವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೀಡಬೇಕು. ಪ್ರಾಧಿಕಾರದ ಮೂಲಕವೇ ಇತರ ಶುಲ್ಕ ನೀಡಬೇಕು. ನಂತರ ಇದನ್ನು ಸಂಬಂಧಿಸಿದ ಕಾಲೇಜುಗಳಿಗೆ ವರ್ಗ ಮಾಡಲಾಗುತ್ತೆ ಎಂದು ಉನ್ನತ ಶಿಕ್ಷಣ ಸಚಿವರು ವಿವರಿಸಿದರು.
ಹಾಸ್ಟೆಲ್ ಹಾಗೂ ವಾಹನ ಸೌಲಭ್ಯದ ಶುಲ್ಕವನ್ನು ಮಾತ್ರ ಕಾಲೇಜುಗಳು ನೇರವಾಗಿ ಪಡೆಯಬಹುದು. ಅತ್ಯಾಧುನಿಕ ಪ್ರಯೋಗಾಲಯ, ವಿಶೇಷ ಕೋರ್ಸ್ ಸೌಲಭ್ಯವಿದ್ದಲ್ಲಿ ಈ ಬಗ್ಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೂಲಕ ಮೌಲ್ಯಮಾಪನ ನಡೆಸಿ ಶುಲ್ಕ ನಿಗದಿಪಡಿಸಬೇಕು. ಅದನ್ನೂ ಪ್ರಾಧಿಕಾರದ ಮೂಲಕವೇ ಪಡೆಯಬೇಕು ಎಂದೂ ಡಾ. ಅಶ್ವತ್ಥನಾರಾಯಣ ಹೇಳಿದರು.
ಇದಕ್ಕೂ ಮುನ್ನ ಅನುದಾನರಹಿತ ಎಂಜಿನಿಯರಿಂಗ್ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಹಾಗೂ ಭಾಷಾ ಮತ್ತು ಧಾರ್ಮಿಕ ಅಲ್ಪಸಂಖ್ಯಾತ ವೃತ್ತಿಪರ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟದ ಪ್ರತಿನಿಧಿಗಳ ಜತೆ ಸಚಿವರು ಸಭೆ ನಡೆಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ