Categories: Main News

ಎಂಜಿನಿಯರಿಂಗ್ ಸೀಟು ಬ್ಲಾಕಿಂಗ್ ತಡೆಗೆ ಕ್ರಮ: ಡಾ. ಅಶ್ವತ್ಥನಾರಾಯಣ

ನೀಟ್ ಪರೀಕ್ಷೆಯ ಮೂಲಕ ವೈದ್ಯಕೀಯ ಶಿಕ್ಷಣದ ಸೀಟುಗಳ ಹಂಚಿಕೆ ಮುಗಿದ ನಂತರವೇ ಎಂಜಿನಿಯರಿಂಗ್ ಸೀಟುಗಳ ಹಂಚಿಕೆಗೆ ಕೌನ್ಸೆಲಿಂಗ್ ನಡೆಸಲು ತೀರ್ಮಾನಿಸಲಾಗಿದೆ. ಸೀಟು ಬ್ಲಾಕಿಂಗ್ ತಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಹೇಳಿದರು.


ಸಚಿವರು ಬೆಂಗಳೂರಿನಲ್ಲಿ ಬುಧವಾರ ವರದಿಗಾರರೊಂದಿಗೆ ಮಾತನಾಡಿದರು. ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಅಡಳಿತ ಮಂಡಳಿಗಳು ಶೇ. ೩೦ರಷ್ಟು ಶುಲ್ಕ ಹೆಚ್ಚಳದ ಬೇಡಿಕೆ ಇಟ್ಟಿದ್ದವು. ಆದರೆ ಇದಕ್ಕೆ ರಾಜ್ಯ ಸರ್ಕಾರ ಸಮ್ಮಿತಿಸಿಲ್ಲ. ಪ್ರವೇಶ ಶುಲ್ಕದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಲೇಜು ಆಡಳಿತ ಮಂಡಳಿಗಳು ಇತರ ಶುಲ್ಕದ ಹೆಸರಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚಿನ ಹಣ ಪಡೆಯುವಂತಿಲ್ಲ. ಇತರೆ ಶುಲ್ಕ ೨೦,೦೦೦ ಸಾವಿರರೂ. ಮೀರುವಂತಿಲ್ಲ. ಇತರ ಶುಲ್ಕದ ವಿವರಗಳನ್ನು ಎಲ್ಲ ಕಾಲೇಜುಗಳು ಕಡ್ಡಾಯವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೀಡಬೇಕು. ಪ್ರಾಧಿಕಾರದ ಮೂಲಕವೇ ಇತರ ಶುಲ್ಕ ನೀಡಬೇಕು. ನಂತರ ಇದನ್ನು ಸಂಬಂಧಿಸಿದ ಕಾಲೇಜುಗಳಿಗೆ ವರ್ಗ ಮಾಡಲಾಗುತ್ತೆ ಎಂದು ಉನ್ನತ ಶಿಕ್ಷಣ ಸಚಿವರು ವಿವರಿಸಿದರು.


ಹಾಸ್ಟೆಲ್ ಹಾಗೂ ವಾಹನ ಸೌಲಭ್ಯದ ಶುಲ್ಕವನ್ನು ಮಾತ್ರ ಕಾಲೇಜುಗಳು ನೇರವಾಗಿ ಪಡೆಯಬಹುದು. ಅತ್ಯಾಧುನಿಕ ಪ್ರಯೋಗಾಲಯ, ವಿಶೇಷ ಕೋರ್ಸ್ ಸೌಲಭ್ಯವಿದ್ದಲ್ಲಿ ಈ ಬಗ್ಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೂಲಕ ಮೌಲ್ಯಮಾಪನ ನಡೆಸಿ ಶುಲ್ಕ ನಿಗದಿಪಡಿಸಬೇಕು. ಅದನ್ನೂ ಪ್ರಾಧಿಕಾರದ ಮೂಲಕವೇ ಪಡೆಯಬೇಕು ಎಂದೂ ಡಾ. ಅಶ್ವತ್ಥನಾರಾಯಣ ಹೇಳಿದರು.


ಇದಕ್ಕೂ ಮುನ್ನ ಅನುದಾನರಹಿತ ಎಂಜಿನಿಯರಿಂಗ್ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಹಾಗೂ ಭಾಷಾ ಮತ್ತು ಧಾರ್ಮಿಕ ಅಲ್ಪಸಂಖ್ಯಾತ ವೃತ್ತಿಪರ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟದ ಪ್ರತಿನಿಧಿಗಳ ಜತೆ ಸಚಿವರು ಸಭೆ ನಡೆಸಿದರು.

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024