ಜಿಲ್ಲಾ ಕರವೇ ಅಧ್ಯಕ್ಷ ಎಚ್ ಡಿ ಜಯರಾಂ ನೇತೃತ್ವದಲ್ಲಿ, ರೈತರು,
ಕಾರ್ಯಕರ್ತರು ಮಂಗಳವಾರ ಹಿಂದಿ ದಿವಸ್ ಆಚರಣೆಯನ್ನು ಖಂಡಿಸಿ ಜಿಲ್ಲಾ ಪ್ರಧಾನ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರ ದೇಶದೆಲ್ಲೆಡೆ ಹಿಂದಿ ಹೇರಿಕೆ ಮಾಡುವ ಉದ್ದೇಶದಿಂದ ಹಿಂದಿ ದಿವಸ್ ಆಚರಣೆ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಹಿಂದಿ ದಿವಸ್ ಆಚರಣೆ ಮಾಡಬಾರದು. ದೇಶದ ಎಲ್ಲ ಭಾಷೆಗಳಿಗೆ ಮಹತ್ವ ನೀಡಬೇಕಲ್ಲದೆ, ಕನ್ನಡ ಭಾಷೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಕಲ್ಪಿಸಬೇಕೆಂದು ಪ್ರತಿಭಟನೆ ಕಾರರು ಆಗ್ರಹಿಸಿದರು.
ಪ್ರತಿಭಟನೆಯ ಒತ್ತಾಯಗಳು:
- ಕೇಂದ್ರ ಸರ್ಕಾರ ರೈತರನ್ನು ಉದ್ಯಮಿಗಳಿಗೆ ಒತ್ತೆ ಇಡಲು ಜಾರಿಗೊಳಿಸಿರುವ ಕಾಯ್ದೆಗಳನ್ನು ಕೂಡಲೇ ರದ್ಧುಪಡಿಸಬೇಕು.
- ಈ ಕಾಯ್ದೆಗಳ ವಿರುದ್ಧ ದೆಹಲಿ ಗಡಿಯಲ್ಲಿ ನಿರಂತರವಾಗಿ ಹೋರಾಟ ನಡೆಸುತ್ತಿರುವ ರೈತರ ಆಗ್ರಹಕ್ಕೆ ಕಿವಿಗೊಡದ ಕೇಂದ್ರ ಸರ್ಕಾರ ಹಿಂದಿ ಹೇರಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ.
- ತಕ್ಷಣ ರೈತರ ಹಿತಕಾಯಲು ಮುಂದಾಗಬೇಕಲ್ಲದೆ, 9.5 ಇಳುವರಿ ಬರುವ ಟನ್ ಕಬ್ಬಿಗೆ 4000 ರೂ. ನಿಗದಿ ಮಾಡಬೇಕು.
- ಸುಪ್ರೀಂ ಕೋರ್ಟ್ ತೀರ್ಪಿನಂತೆ 14 ದಿನದೊಳಗೆ ರೈತರಿಗೆ ಕಬ್ಬಿನ ಹಣ ಪಾವತಿಸಲು ಕ್ರಮಕೈಗೊಳ್ಳಬೇಕು.
- ರೈತರ ಕಬ್ಬು ಇಳುವರಿ ಹಾಗೂ ತೂಕದ ಯಂತ್ರಗಳ ಮೇಲೆ ಹದ್ದಿನ ಕಣ್ಣಿಡಲು ರೈತರು ಹಾಗೂ ಜನಪರ ಸಂಘಟನೆಗಳು ಹಾಗೂ ಅಧಿಕಾರಿಗಳನ್ನು ಒಗ್ಗೂಡಿ ಸಮಿತಿಯನ್ನು ರಚಿಸಬೇಕು.
- ಹಿಂದಿ ಹೇರಿಕೆಯಿಂದ ಹಿಂದೆ ಸರಿದು, ನಮ್ಮ ಇತರೆ ಬೇಡಿಕೆಗಳನ್ನು ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ