ಕಿರುತೆರೆಯ ನಟ ಯಲಹಂಕ ಬಾಲಾಜಿ ಕೆಲ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ನಿರ್ದೇಶಕ ಟಿ.ಎನ್. ಸೀತಾರಾಮ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಈ ಸಂಗತಿ ಬರೆದುಕೊಂಡಿದ್ದಾರೆ.
ಸೀತಾರಾಮ್ ಅವರ ಬಹುತೇಕ ಧಾರಾವಾಹಿಗಳಲ್ಲಿ ಬಾಲಾಜಿ ನಟಿಸುತ್ತಿದ್ದರು ಎಂದು ನೆನಪಿಸಿಕೊಂಡಿದ್ದಾರೆ.
ಕನ್ನಡದ ಅತ್ಯಂತ ಜನಪ್ರಿಯ ಧಾರಾವಾಹಿಗಳಾದ ಮಾಯಾಮೃಗದಿಂದ ಮಗಳು ಜಾನಕಿವರೆಗೂ ಸೀತಾರಾಮ್ ಧಾರಾವಾಹಿಗಳಲ್ಲಿ ಬಾಲಾಜಿ ನಟಿಸಿದ್ದರು.
ಕೆಆರ್ ಎಸ್ ನಲ್ಲಿ ಕಾವೇರಿ ಮಾತೆಗೆ ಬಾಗೀನ ಸಮರ್ಪಿಸಿದ ಸಿಎಂ ಬೊಮ್ಮಾಯಿ
ರಂಗಭೂಮಿ ಮತ್ತು ಚಲನಚಿತ್ರಗಳಲ್ಲೂ ಅವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಅಗಲಿದ ನಟನಿಗೆ ಕಂಬನಿ ಮಿಡಿದಿರುವ ಸೀತಾರಾಮ್ ‘ಅತ್ಯಂತ ಹೃದಯವಂತ ಗೆಳೆಯ. ಎಲ್ಲಾ ಕಷ್ಟಗಳಲ್ಲೂ, ಸಂತೋಷಗಳಲ್ಲೂ ಜತೆಗೆ ಇರುತ್ತಿದ್ದ ಮನುಷ್ಯ. ಇಡೀ ಬದುಕಿನುದ್ದಕ್ಕೂ ಕಷ್ಟ ಕಂಡಿದ್ದರೂ, ನಗುತ್ತಾ ಬದುಕಿದ ಗೆಳೆಯ.
ಬಾಲಾಜಿ ಇನ್ನಿಲ್ಲ ಎಂದು ನೆನಪಿಸಿಕೊಂಡರೆ ಅಪಾರ ಸಂಕಟವಾಗುತ್ತದೆ’ ಎಂದು ಟಿ.ಎನ್.ಸೀರಾತಾಮ್ ಸ್ಮರಿಸಿಕೊಂಡಿದ್ದಾರೆ.
- ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ
- ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ