ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರನ್ನು ಅಮೆರಿಕಾಗೆ ಗಡಿಪಾರು ಮಾಡುವಂತೆ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಿಂದ ಎಡಿಜಿಪಿ ಪ್ರತಾಪ್ ರೆಡ್ಡಿ ಮೂಲಕ ಗೃಹಮಂತ್ರಿ ಕಛೇರಿಯು ಮುಖ್ಯ ಕಾರ್ಯದರ್ಶಿಗೆ ಶಿಫಾರಸ್ಸು ಪತ್ರ ಬರೆದಿದ್ದಾರೆ.
ಒಂದು ಸಮುದಾಯಕ್ಕೆ ಅವಹೇಳನಕ್ಕೆ ಸಂಬಂಧಿಸಿದಂತೆ ಚೇತನ್ ಮೇಲೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕುರಿತು ತನಿಖೆ ನಡೆಸಿದ ಪೊಲೀಸ್ ಇಲಾಖೆ, ಚೇತನ್ ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡುತ್ತಿದ್ದಾರೆ. ಹಾಗಾಗಿ ಅವರನ್ನು ಅಮೆರಿಕಾಗೆ ಗಡಿಪಾರು ಮಾಡುವಂತೆ ಶಿಫಾರಸ್ಸು ಮಾಡಿದ್ದಾರೆ ಎನ್ನುವ ಮಾಹಿತಿ ಹೊರ ಬಿದ್ದಿದೆ.
ಮೂಲತಃ ಮೈಸೂರಿನವರಾದ ಚೇತನ್ ಕುಟುಂಬ ಅಮೆರಿಕಾದಲ್ಲಿ ವಾಸವಿದೆ. ಚೇತನ್ ಅಮೆರಿಕಾದಲ್ಲೇ ಹುಟ್ಟಿ ಬೆಳೆದಿದ್ದಾರೆ. ಅವರು ಅಲ್ಲಿನ ಪೌರತ್ವ ಪಡೆದಿದ್ದಾರೆ. ಹಾಗಾಗಿ ಅಮೆರಿಕಾಗೆ ಗಡಿಪಾರು ಮಾಡುವಂತೆ ಶಿಫಾರಸ್ಸಿನಲ್ಲಿ ತಿಳಿಸಲಾಗಿದೆಯಂತೆ.
ತಮ್ಮನ್ನು ಗಡಿಪಾರು ಮಾಡುವಂತೆ ಶಿಫಾರಸ್ಸು ಮಾಡಿರುವ ವಿಷಯ ತಮಗೆ ಗೊತ್ತಿಲ್ಲ ಮತ್ತು ತಮ್ಮ ವಕೀಲರ ಗಮನಕ್ಕೂ ಬಂದಿಲ್ಲ ಎಂದ ಚೇತನ್ ಹೇಳಿದ್ದಾರೆ
ನಾನು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನನ್ನ ಹೋರಾಟ ನಿರಂತರವಾಗಿ ಇರಲಿದೆ ಎಂದು ಅವರು ಹೇಳಿದ್ದಾರೆ. ಎರಡು ದಿನಗಳಿಂದ ಇಂಥದ್ದೊಂದು ಸುದ್ದಿ ಭಾರೀ ಸದ್ದು ಮಾಡುತ್ತಿದ್ದರೂ, ಪೊಲೀಸ್ ಇಲಾಖೆಯಾಗಲಿ, ಸರ್ಕಾರವಾಗಲಿ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ ಎಂದಿದ್ದಾರೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment