filmy

ನಟ ಚಿರಂಜೀವಿ ಪುತ್ರಿ ಶ್ರೀಜಾ ಎರಡನೇ ಗಂಡನಿಗೂ ಗುಡ್ ಬೈ ಹೇಳುತ್ತಾರಾ ?

ದಕ್ಷಿಣ ಭಾರತದ ಚಿತ್ರರಂಗ ಸೂಪರ್ ಸ್ಟಾರ್ ಗಳ ಕುಟುಂಬಗಳಲ್ಲಿ ಭೀಕರ ಬಿರುಗಾಳಿ ಬೀಸುತ್ತಿದೆ

ನಿನ್ನೆಯಷ್ಟೇ ಕಾಲಿವುಡ್​ ಸೂಪರ್​ಸ್ಟಾರ್​ ರಜನಿ ಕಾಂತ್​ ಪುತ್ರಿ ಐಶ್ವರ್ಯ ಹಾಗೂ ನಟ ಧನುಷ್ ತಮ್ಮ ಸಂಸಾರಿಕ ಬದುಕಿಗೆ ದಿಢೀರ್​ ವಿದಾಯ ಹೇಳುವ ಮೂಲಕ ಅಭಿಮಾನಿಗಳಿಗೆ ಶಾಕ್​ ಕೊಟ್ಟಿದ್ದಾರೆ

ಈಗ ತೆಲುಗಿನ ಮೆಗಾ ಸ್ಟಾರ್​ ಚಿರಂಜೀವಿ ಪುತ್ರಿ ಶ್ರೀಜಾ ಕೂಡ ತಮ್ಮ ಇನ್​ಸ್ಟಾಗ್ರಾಮ್​​ನಲ್ಲಿ ಅವರ ಹೆಸರಿನ ಮುಂದಿದ್ದ ತಮ್ಮ ಪತಿಯ ಹೆಸರನ್ನು ತೆಗೆದುಹಾಕಿದ್ದಾರೆ.

ಈ ಹಿಂದೆ ಶ್ರೀಜಾ ಕಲ್ಯಾಣ್​ ಎಂದಿದ್ದ ತಮ್ಮ ಹೆಸರನ್ನು ಶ್ರೀಜಾ ಕೊನಿಡೇಲ ಅಂತ ಬದಲಾಯಿಸಿಕೊಂಡಿದ್ದಾರೆ.

ಶ್ರೀಜಾ ಹಾಗೂ ನಟ ಕಲ್ಯಾಣ್​ ದೇವ್​ ಸಾಂಸಾರಿಕ ಜೀವನದಲ್ಲಿ ಬಿರುಕು ಮೂಡಿದ್ದು ಇಬ್ಬರೂ ಶ್ರೀಘದಲ್ಲಿಯೇ ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎಂಬ ಸುದ್ದಿ ಟಾಲಿವುಡ್​ ಅಂಗಳದಲ್ಲಿ ಕೇಳಿಬರುತ್ತಿದೆ.

ಶ್ರೀಜಾ ಹಾಗೂ ಕಲ್ಯಾಣ್​ ದೇವ್​ 2016 ಮಾರ್ಚ್​ 28 ರಂದು ತಮ್ಮ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.
ಈ ದಂಪತಿಗೆ ನಾವಿಷ್ಕಾ ಎಂಬ ಹೆಣ್ಣು ಮಗುವಿದೆ.

ಕಲ್ಯಾಣ್​ ದೇವ್​ ಅವರನ್ನು ವಿವಾಹವಾಗುವ ಮುನ್ನ ಶ್ರೀಜಾ 2007 ರಲ್ಲಿ ಸಿರಿಶ್ ಭಾರದ್ವಾಜ್ ಎಂಬುವವರನ್ನು ಮದುವೆಯಾಗಿದ್ದರು. 2009 ರಲ್ಲಿ ಈ ದಂಪತಿಗೆ ನಿವೃತಿ ಎಂಬ ಹೆಣ್ಣು ಮಗು ಹುಟ್ಟಿತ್ತು. ಆದರೆ 2011ರಲ್ಲಿ ಶ್ರೀಜಾ, ಭಾರಧ್ವಾಜ್ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ದಾಖಲಿಸಿ ಡಿವೋರ್ಸ್​ ಪಡೆದು ತಮ್ಮ ಬಾಲ್ಯದ ಗೆಳೆಯ ಕಲ್ಯಾಣ್​ ದೇವ್​ ಅವರನ್ನು ವಿವಾಹವಾಗಿದ್ದಾರೆ. ಈಗ ಎರಡನೇ ಗಂಡನಿಗೂ ವಿಚ್ಚೇದನ ನೀಡಲು ತುದಿಗಾಲಿನಲ್ಲಿ ನಿಂತಿದ್ದಾರೆಂದು ಹೇಳಲಾಗಿದೆ
ಈ ಸುದ್ದಿ ನಿಜವಾದರೆ ಮೆಗಸ್ಟಾರ್ ಚಿರಂಜೀವಿ ಕುಟುಂಬಕ್ಕೆ ಮತ್ತೆ ಅಘಾತ ಎದುರಾಗಲಿದೆ.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024