Main News

ಆನೆ ಮೇಲೆ ನಿಂತು ಫೋಸ್- ನಟ ಧನ್ವೀರ್ ವಿರುದ್ಧ ಎಫ್ಐಆರ್

ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ವೇಳೆ ಸಫಾರಿ ನಡೆಸಿದ್ದ ಆರೋಪದ ಮೇಲೆ ನಟ ಧನ್ವೀರ್‌ ಗೌಡ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಆದರೆ ಇದು ಸಫಾರಿ ಮಾಡಿದ್ದಕ್ಕಲ್ಲ, ಬದಲಿಗೆ ಆನೆಯ ಮೇಲೆ ನಿಂತು ಫೋಸ್‌ ಕೊಟ್ಟಿದ್ದ ಕಾರಣಕ್ಕಾಗಿ!

‘ಬಜಾರ್’ ಚಿತ್ರದ ನಾಯಕ ನಟ ಧನ್ವೀರ್‌ ಗೌಡ ಈ ಹಿಂದೆ ಆನೆಯ ಮೇಲೆ ಕುಳಿತು ಫೋಟೋ ತೆಗೆಸಿಕೊಂಡಿದ್ದಕ್ಕಾಗಿ ‘ನಾಗರಹೊಳೆ ರಾಷ್ಟ್ರೀಯ ಉದ್ಯಾನವನ’ದ ನಿರ್ದೇಶಕರ ಸೂಚನೆ ಮೇರೆಗೆ ಎಫ್‌ಐಆರ್ ದಾಖಲಿಸ ಲಾಗಿದೆ.
ಇನ್ನು ಎಫ್‌ಐಆರ್‌ನಲ್ಲಿ ಧನ್ವೀರ್ ಸೇರಿದಂತೆ 6 ಮಂದಿ ಹೆಸರನ್ನು ಸಹ ಸೇರಿಸಲಾಗಿದೆ. ಅರಣ್ಯ ಇಲಾಖೆಯ ದೂರಿನನ್ವಯ ಧನ್ವೀರ್‌ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು ಅವರೊಟ್ಟಿಗಿದ್ದ 5 ಮಂದಿ ಸೇಹ್ನಿತರಿಗೂ ಇದೀಗ ಸಂಕಷ್ಟ ಎದುರಾದಂತಿದೆ.

ಸೆ.27ರಂದು ಮತ್ತಿಗೂಡು ಆನೆ ಶಿಬಿರಕ್ಕೆ ಭೇಟಿ ನೀಡಿದ್ದ ಧನ್ವೀರ್ ಅವರೊಟ್ಟಿಗಿನ ಸ್ನೇಹಿತರು ಅಲ್ಲಿನ ಆನೆಗಳನ್ನ ಕಂಡು ಅವುಗಳ ಮೇಲೆ ಏರಿ ಕುಳಿತು ಪೋಟೋ, ವಿಡಿಯೋಗೆ ಪೋಸ್ ಕೊಟ್ಟಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ ಧನ್ವೀರ್‌ ಮೇಲೆ ಅರಣ್ಯ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಎಫ್‌ಐಆರ್‌ ದಾಖಲು ಮಾಡಿದೆ. ವನ್ಯಜೀವಿ ಸಂರಕ್ಷಣ ಕಾಯ್ದೆ 1972 ಅಡಿಯಲ್ಲಿ ದೂರು ಇದಾಗಿದ. ಧನ್ವೀರ್‌, ವಿಶ್ವಾಸ್‌ ಅಯ್ಯರ್‌, ದರ್ಶನ್‌ ಬಿನ್‌ ನಂದಕುಮಾರ್ ಹಾಗೂ ಈ ಜೊತೆಗೆ ಹೆಸರು ಪತ್ತೆಯಾಗದ ಇನ್ನೂ ಮೂವರು ಆರೋಪಿಗಳ ಮೇಲೆ ಕೇಸ್‌ ದಾಖಲಾಗಿದೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ನಿರ್ದೇಶಕರಾದ‌ ಮಹೇಶ್ ಅವರು ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಚಿತ್ರರಂಗದ ತಾರೆಯರು ಎಂದು ಹೇಳಿಕೊಂಡು ಆನೆ ಚೌಕೂರು ವನ್ಯಜೀವಿ ವಲಯಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.


Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024