ಹಿರಿಯ ರಂಗಭೂಮಿ ಕಲಾವಿದ ಮತ್ತು ನಟ ಎಚ್.ಜಿ ಸೋಮಶೇಖರ್ ರಾವ್ ಮಂಗಳವಾರ ನಿಧನರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 86 ವರ್ಷದ ಸೋಮಶೇಖರ್ ರಾವ್ ಇಂದು 12.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಸೋಮಶೇಖರ್ ರಾವ್ ಹಿರಿಯ ನಟ ದತ್ತಣ್ಣ ಸಹೋದರ. ಬ್ಯಾಂಕ್ ಅಧಿಕಾರಿಯಾಗಿದ್ದ ಎಚ್.ಜಿ ಸೋಮಶೇಖರ್ ರಾವ್ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿದ್ದರು. ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕ ಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದವರು.
1981ರಲ್ಲಿ ಟಿ.ಎಸ್ ರಂಗ ನಿರ್ದೇಶನದ ‘ಸಾವಿತ್ರಿ’ ಸಿನಿಮಾ ಮೂಲಕ ಸೋಮಶೇಖರ್ ರಾವ್ ಚಿತ್ರರಂಗವನ್ನು ಪ್ರವೇಶಿಸಿದ್ದಾರೆ. ನಂತರ ರಾಯರು ಅನೇಕ ಚಿತ್ರಗಳಲ್ಲಿ ಭಾವ ಪ್ರಧಾನ ಮತ್ತು ಹಾಸ್ಯ ಪ್ರಧಾನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ರವಿ ನಿರ್ದೇಶನದ ‘ಮಿಥಿಲೆಯ ಸೀತೆಯರು’ ಇವರ ಅಭಿನಯ ಸಾಮರ್ಥ್ಯವನ್ನು ಸರಿಯಾಗಿ ಗುರುತಿಸುವಂತೆ ಮಾಡಿತು.
ರವಿ ಅವರೇ ನಿರ್ದೇಶಿಸಿದ ಇನ್ನೊಂದು ಚಿತ್ರ ‘ಹರಕೆಯ ಕುರಿ’ಯಲ್ಲಿ ಸೋಮಶೇಖರ್ ರಾವ್ ನೀಡಿದ ಸೊಗಸಾದ ಅಭಿನಯಕ್ಕಾಗಿ 1992 -93ನೇ ಸಾಲಿನ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಲಭಿಸಿತ್ತು. ಕನ್ನಡ ರಂಗಭೂಮಿಗೆ ತಮ್ಮ ಸೇವೆಯನ್ನು ಸಲ್ಲಿಸುವುದೇ ಸೋಮಶೇಖರ್ ರಾವ್ ಅವರ ನಿಜವಾದ ಕಾಯಕ.
ಕಿರುತೆರೆ, ಚಲನಚಿತ್ರಗಳಿಗಿಂತ ಮಿಗಿಲಾಗಿ ರಂಗ ಕೈಂಕರ್ಯವನ್ನು ಪ್ರೀತಿಸಿದ ಸೋಮಶೇಖರ್ ರಾವ್ ಇನ್ನು ನೆನಪು ಮಾತ್ರ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು