ನಟ ಜಗ್ಗೇಶ್ ಪುತ್ರನ ಬಿಎಂಡಬ್ಲ್ಯೂ ಕಾರ್ ಭೀಕರ ಅಪಘಾತ ಕ್ಕೊಳಗಾಗಿದೆ.
ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರ್ನಲ್ಲಿ ಜಗ್ಗೇಶ್ ಪುತ್ರ ಗುರುರಾಜ್ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಚಿಕ್ಕಬಳ್ಳಾಪುರದ ಬೆಂಗಳೂರು- ಹೈದ್ರಾಬಾದ್ ರಸ್ತೆ ಯ ಹೊರವಲಯದಲ್ಲಿ ಈ ಭೀಕರ ಅಪಘಾತ ಸಂಭವಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸದೆ. ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಢಿಕ್ಕಿಯೊಡೆದ ಪರಿಣಾಮ ಅಪಘಾತವಾಗಿದೆ ಎನ್ನಲಾಗಿದೆ.
ಗುರುರಾಜ್ ಬಲಗೈಗೆ ಪೆಟ್ಟಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ.