ಕನ್ನಡದ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಘೋಷಿಸಿದೆ. ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಮೇಶ್ ಅವರನ್ನು ಗೌರವ ಡಾಕ್ಟರೇಟ್ಗೆ ಆಯ್ಕೆ ಮಾಡಲಾಗಿದೆ.
ರಮೇಶ್ ಅರವಿಂದ್ ಅವರ ಜೊತೆ ಸಮಾಜ ಸೇವೆ ಕ್ಷೇತ್ರದಲ್ಲಿ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಮಾತೆ ಅಕ್ಕ ಅನ್ನಪೂರ್ಣ ತಾಯಿಗೆ ಗೌರವ ಡಾಕ್ಟರೇಟ್ ಘೋಷಣೆಯಾಗಿದೆ.
ಸೆ.14 ರಂದು ಮಧ್ಯಾಹ್ನ 12 ಕ್ಕೆ ಸುವರ್ಣಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ವಿ.ವಿ ತಿಳಿಸಿದೆ. ಇದನ್ನು ಓದಿ :ನಂದಿನಿ ಹಾಲಿನ ದರ 3 ರು ಏರಿಕೆ : ತುಪ್ಪ ಬೆಲೆ 100 ಏರಿಕೆ ಗ್ರಾಹಕರಿಗೆ ಭಾರಿ ಶಾಕ್
ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ವಹಿಸಲಿದ್ದು, ಆಂಧ್ರದ ಕೇಂದ್ರಿಯ ಬುಡಕಟ್ಟು ವಿವಿ ಕುಲಪತಿ ಪ್ರೊ. ಟಿ.ವಿ ಕಟ್ಟಿಮನಿ ಅವರಿಂದ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ